Polls

ರಾಮನಗರದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅಚ್ಚರಿಯ ಹಿನ್ನಡೆ

ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್‌ ಹುಸೇನ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ 30,029 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ 25,921 ಮತಗಳನ್ನು ಪಡೆದು ಸುಮಾರು 4 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.

ರಾಮನಗರ ಮೊದಲಿನಿಂದಲೂ ಜೆಡಿಎಸ್‌ನ, ಅದರಲ್ಲೂ ಎಚ್‌.ಡಿ. ಕುಮಾರಸ್ವಾಮಿ ಅವರ ಭದ್ರಕೋಟೆ. ಸತತವಾಗಿ ಗೆಲುವು ಸಾಧಿಸುತ್ತಿದ್ದ ಅವರು ಹಿಂದಿನ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ನೀಡಿದ್ದರು. ಕಳೆದ ಬಾರಿ ಪತ್ನಿಯನ್ನು ಗೆಲ್ಲಿಸಿಕೊಂಡಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಈ ಬಾರಿ ಪುತ್ರನನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,06,512 ಪುರುಷ ಮತದಾರರು, 1,09,530 ಮಹಿಳೆಯರು, 19 ಇತರ ಮತದಾರರು ಸೇರಿ ಒಟ್ಟು 2,19,079 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.84.09 ರಷ್ಟು ದೊಡ್ಡ ಪ್ರಮಾಣದ ಮತದಾನ ನಡೆದಿತ್ತು.

2018ರಲ್ಲಿ ಇಲ್ಲಿ ಎಚ್‌ಡಿ ಕುಮಾರಸ್ವಾಮಿ ಜಯ ಸಾಧಿಸಿದ್ದರು. ಅವರು 92626 ಮತಗಳನ್ನು ಪಡೆದು 69990 ಮತಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಎಚ್‌.ಎ. ವಿರುದ್ಧ 22636 ಮತಗಳ ಅಂತರದ ಭರ್ಜರಿ ಜಯ ಸಾಧಿಸಿದ್ದರು.

andolanait

Share
Published by
andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

10 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

10 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

10 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

10 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

10 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

10 hours ago