Polls

ರಾಮನಗರದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅಚ್ಚರಿಯ ಹಿನ್ನಡೆ

ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್‌ ಹುಸೇನ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ 30,029 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ 25,921 ಮತಗಳನ್ನು ಪಡೆದು ಸುಮಾರು 4 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.

ರಾಮನಗರ ಮೊದಲಿನಿಂದಲೂ ಜೆಡಿಎಸ್‌ನ, ಅದರಲ್ಲೂ ಎಚ್‌.ಡಿ. ಕುಮಾರಸ್ವಾಮಿ ಅವರ ಭದ್ರಕೋಟೆ. ಸತತವಾಗಿ ಗೆಲುವು ಸಾಧಿಸುತ್ತಿದ್ದ ಅವರು ಹಿಂದಿನ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ನೀಡಿದ್ದರು. ಕಳೆದ ಬಾರಿ ಪತ್ನಿಯನ್ನು ಗೆಲ್ಲಿಸಿಕೊಂಡಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಈ ಬಾರಿ ಪುತ್ರನನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,06,512 ಪುರುಷ ಮತದಾರರು, 1,09,530 ಮಹಿಳೆಯರು, 19 ಇತರ ಮತದಾರರು ಸೇರಿ ಒಟ್ಟು 2,19,079 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.84.09 ರಷ್ಟು ದೊಡ್ಡ ಪ್ರಮಾಣದ ಮತದಾನ ನಡೆದಿತ್ತು.

2018ರಲ್ಲಿ ಇಲ್ಲಿ ಎಚ್‌ಡಿ ಕುಮಾರಸ್ವಾಮಿ ಜಯ ಸಾಧಿಸಿದ್ದರು. ಅವರು 92626 ಮತಗಳನ್ನು ಪಡೆದು 69990 ಮತಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಎಚ್‌.ಎ. ವಿರುದ್ಧ 22636 ಮತಗಳ ಅಂತರದ ಭರ್ಜರಿ ಜಯ ಸಾಧಿಸಿದ್ದರು.

andolanait

Share
Published by
andolanait

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

2 hours ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

2 hours ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

2 hours ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

2 hours ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

2 hours ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

2 hours ago