Polls

ರಾಮನಗರದಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅಚ್ಚರಿಯ ಹಿನ್ನಡೆ

ಎಚ್‌.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಯಿಂದಾಗಿ ರಾಮನಗರ ಕ್ಷೇತ್ರ ಈ ಬಾರಿ ಕುತೂಹಲ ಕೆರಳಿಸಿದೆ. ಇಲ್ಲಿ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಅವರಿಗೆ ತೀವ್ರ ಸ್ಪರ್ಧೆ ಒಡ್ಡಿದ್ದಾರೆ. ಹೀಗಾಗಿ ಅವರು ತಮ್ಮ ತಂದೆಯ ಭದ್ರಕೋಟೆಯಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಇಲ್ಲಿ ಇಕ್ಬಾಲ್‌ ಹುಸೇನ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ 30,029 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್‌ನ ನಿಖಿಲ್‌ ಕುಮಾರಸ್ವಾಮಿ 25,921 ಮತಗಳನ್ನು ಪಡೆದು ಸುಮಾರು 4 ಸಾವಿರ ಮತಗಳಿಂದ ಹಿನ್ನಡೆ ಅನುಭವಿಸಿದ್ದಾರೆ.

ರಾಮನಗರ ಮೊದಲಿನಿಂದಲೂ ಜೆಡಿಎಸ್‌ನ, ಅದರಲ್ಲೂ ಎಚ್‌.ಡಿ. ಕುಮಾರಸ್ವಾಮಿ ಅವರ ಭದ್ರಕೋಟೆ. ಸತತವಾಗಿ ಗೆಲುವು ಸಾಧಿಸುತ್ತಿದ್ದ ಅವರು ಹಿಂದಿನ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಗೆ ನೀಡಿದ್ದರು. ಕಳೆದ ಬಾರಿ ಪತ್ನಿಯನ್ನು ಗೆಲ್ಲಿಸಿಕೊಂಡಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಈ ಬಾರಿ ಪುತ್ರನನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳಲು ಹೊರಟಿದ್ದಾರೆ.

ಈ ಬಾರಿ ಕ್ಷೇತ್ರದಲ್ಲಿ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 1,06,512 ಪುರುಷ ಮತದಾರರು, 1,09,530 ಮಹಿಳೆಯರು, 19 ಇತರ ಮತದಾರರು ಸೇರಿ ಒಟ್ಟು 2,19,079 ಮತದಾರರು ಮತದಾನದ ಹಕ್ಕು ಹೊಂದಿದ್ದಾರೆ. ಮೇ 10ರಂದು ನಡೆದಿದ್ದ ಮತದಾನದ ವೇಳೆ ಕ್ಷೇತ್ರದಲ್ಲಿ ಶೇ.84.09 ರಷ್ಟು ದೊಡ್ಡ ಪ್ರಮಾಣದ ಮತದಾನ ನಡೆದಿತ್ತು.

2018ರಲ್ಲಿ ಇಲ್ಲಿ ಎಚ್‌ಡಿ ಕುಮಾರಸ್ವಾಮಿ ಜಯ ಸಾಧಿಸಿದ್ದರು. ಅವರು 92626 ಮತಗಳನ್ನು ಪಡೆದು 69990 ಮತಗಳನ್ನು ಪಡೆದುಕೊಂಡಿದ್ದ ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಎಚ್‌.ಎ. ವಿರುದ್ಧ 22636 ಮತಗಳ ಅಂತರದ ಭರ್ಜರಿ ಜಯ ಸಾಧಿಸಿದ್ದರು.

andolanait

Share
Published by
andolanait

Recent Posts

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

5 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

5 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

5 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

8 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

9 hours ago