ಬೆಂಗಳೂರು: ಇಡೀ ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬುಧವಾರ ಭರ್ಜರಿ ಮತದಾನ ನಡೆದಿದೆ. ಅಲ್ಲಲ್ಲಿ ಇವಿಎಂಗಳಲ್ಲಿ ದೋಷ, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಂತಹ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಮತದಾರರು ಬಿರು ಬಿಸಿಲನ್ನೂ ಲೆಕ್ಕಿಸದೆ ಉತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು. ಸಾಂವಿಧಾನಿಕ ಹಕ್ಕು ಚಲಾವಣೆಯ ಮೂಲಕ ನಾಯಕರ ಆಯ್ಕೆಯಲ್ಲಿ ತಮಗಿರುವ ಅಸ್ತ್ರವನ್ನು ಬಳಸಿಕೊಂಡರು. ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಈ ಬಾರಿ ಮತದಾನವು ಕಳೆದ ಬಾರಿಗಿಂತಲೂ ಹೆಚ್ಚಾಗಿದೆ. ಒಟ್ಟು ಮತದಾನ 72.67 % ಮತದಾನವಾಗಿದೆ. ಗರಿಷ್ಠ ಮತದಾನ ಚಿಕ್ಕಬಳ್ಳಾಪುರ- 85% , ಕನಿಷ್ಠ ಮತದಾನ ಬೆಂಗಳೂರು ಉತ್ತರ – 52% ಜಿಲ್ಲೆಗಳಲ್ಲಿ ಆಗಿದೆ.
ಗರಿಷ್ಠ ವೋಟಿಂಗ್ ಟಾಪ್ 10 ಜಿಲ್ಲೆಗಳು
1.ಚಿಕ್ಕಬಳ್ಳಾಪುರ-85.83 %
2.ರಾಮನಗರ – 84.98%
3.ಮಂಡ್ಯ – 84.36 %
4.ಬೆಂಗಳೂರು ಗ್ರಾಮಾಂತರ 83.76%
5.ತುಮಕೂರು – 83.46%
6.ಕೋಲಾರ – 81.22 %
7.ಹಾಸನ – 81.59 %
8.ಹಾವೇರಿ 81.17%
9.ಚಾಮರಾಜನಗರ – 80.81 %
10.ಚಿತ್ರದುರ್ಗ – 80.37 %
ಜಿಲ್ಲೆ – ಮತದಾನ ಪ್ರಮಾಣ (ಶೇಕಡಾವಾರು ಮತದಾನ)
58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಒಟ್ಟು ಅರ್ಹತೆ ಪಡೆದಿದ್ದ 5,30,85,566 ಮಂದಿ ಮತದಾರರಪೈಕಿ ಶೇ.72.67 ರಷ್ಟು (3.85 ಕೋಟಿ) ಮಂದಿ ಮತಚಲಾವಣೆ ಮಾಡಿದ್ದಾರೆ.
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…