ಬೆಂಗಳೂರು: ಇಡೀ ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬುಧವಾರ ಭರ್ಜರಿ ಮತದಾನ ನಡೆದಿದೆ. ಅಲ್ಲಲ್ಲಿ ಇವಿಎಂಗಳಲ್ಲಿ ದೋಷ, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಂತಹ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಮತದಾರರು ಬಿರು ಬಿಸಿಲನ್ನೂ ಲೆಕ್ಕಿಸದೆ ಉತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು. ಸಾಂವಿಧಾನಿಕ ಹಕ್ಕು ಚಲಾವಣೆಯ ಮೂಲಕ ನಾಯಕರ ಆಯ್ಕೆಯಲ್ಲಿ ತಮಗಿರುವ ಅಸ್ತ್ರವನ್ನು ಬಳಸಿಕೊಂಡರು. ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಈ ಬಾರಿ ಮತದಾನವು ಕಳೆದ ಬಾರಿಗಿಂತಲೂ ಹೆಚ್ಚಾಗಿದೆ. ಒಟ್ಟು ಮತದಾನ 72.67 % ಮತದಾನವಾಗಿದೆ. ಗರಿಷ್ಠ ಮತದಾನ ಚಿಕ್ಕಬಳ್ಳಾಪುರ- 85% , ಕನಿಷ್ಠ ಮತದಾನ ಬೆಂಗಳೂರು ಉತ್ತರ – 52% ಜಿಲ್ಲೆಗಳಲ್ಲಿ ಆಗಿದೆ.
ಗರಿಷ್ಠ ವೋಟಿಂಗ್ ಟಾಪ್ 10 ಜಿಲ್ಲೆಗಳು
1.ಚಿಕ್ಕಬಳ್ಳಾಪುರ-85.83 %
2.ರಾಮನಗರ – 84.98%
3.ಮಂಡ್ಯ – 84.36 %
4.ಬೆಂಗಳೂರು ಗ್ರಾಮಾಂತರ 83.76%
5.ತುಮಕೂರು – 83.46%
6.ಕೋಲಾರ – 81.22 %
7.ಹಾಸನ – 81.59 %
8.ಹಾವೇರಿ 81.17%
9.ಚಾಮರಾಜನಗರ – 80.81 %
10.ಚಿತ್ರದುರ್ಗ – 80.37 %
ಜಿಲ್ಲೆ – ಮತದಾನ ಪ್ರಮಾಣ (ಶೇಕಡಾವಾರು ಮತದಾನ)
58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಒಟ್ಟು ಅರ್ಹತೆ ಪಡೆದಿದ್ದ 5,30,85,566 ಮಂದಿ ಮತದಾರರಪೈಕಿ ಶೇ.72.67 ರಷ್ಟು (3.85 ಕೋಟಿ) ಮಂದಿ ಮತಚಲಾವಣೆ ಮಾಡಿದ್ದಾರೆ.
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…