ಬೆಂಗಳೂರು: ಇಡೀ ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬುಧವಾರ ಭರ್ಜರಿ ಮತದಾನ ನಡೆದಿದೆ. ಅಲ್ಲಲ್ಲಿ ಇವಿಎಂಗಳಲ್ಲಿ ದೋಷ, ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಂತಹ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದೆ.
ಮತದಾರರು ಬಿರು ಬಿಸಿಲನ್ನೂ ಲೆಕ್ಕಿಸದೆ ಉತ್ಸಾಹದಿಂದ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು. ಸಾಂವಿಧಾನಿಕ ಹಕ್ಕು ಚಲಾವಣೆಯ ಮೂಲಕ ನಾಯಕರ ಆಯ್ಕೆಯಲ್ಲಿ ತಮಗಿರುವ ಅಸ್ತ್ರವನ್ನು ಬಳಸಿಕೊಂಡರು. ಚುನಾವಣಾ ಆಯೋಗದ ಅಂಕಿ ಅಂಶಗಳ ಪ್ರಕಾರ ಈ ಬಾರಿ ಮತದಾನವು ಕಳೆದ ಬಾರಿಗಿಂತಲೂ ಹೆಚ್ಚಾಗಿದೆ. ಒಟ್ಟು ಮತದಾನ 72.67 % ಮತದಾನವಾಗಿದೆ. ಗರಿಷ್ಠ ಮತದಾನ ಚಿಕ್ಕಬಳ್ಳಾಪುರ- 85% , ಕನಿಷ್ಠ ಮತದಾನ ಬೆಂಗಳೂರು ಉತ್ತರ – 52% ಜಿಲ್ಲೆಗಳಲ್ಲಿ ಆಗಿದೆ.
ಗರಿಷ್ಠ ವೋಟಿಂಗ್ ಟಾಪ್ 10 ಜಿಲ್ಲೆಗಳು
1.ಚಿಕ್ಕಬಳ್ಳಾಪುರ-85.83 %
2.ರಾಮನಗರ – 84.98%
3.ಮಂಡ್ಯ – 84.36 %
4.ಬೆಂಗಳೂರು ಗ್ರಾಮಾಂತರ 83.76%
5.ತುಮಕೂರು – 83.46%
6.ಕೋಲಾರ – 81.22 %
7.ಹಾಸನ – 81.59 %
8.ಹಾವೇರಿ 81.17%
9.ಚಾಮರಾಜನಗರ – 80.81 %
10.ಚಿತ್ರದುರ್ಗ – 80.37 %
ಜಿಲ್ಲೆ – ಮತದಾನ ಪ್ರಮಾಣ (ಶೇಕಡಾವಾರು ಮತದಾನ)
58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಒಟ್ಟು ಅರ್ಹತೆ ಪಡೆದಿದ್ದ 5,30,85,566 ಮಂದಿ ಮತದಾರರಪೈಕಿ ಶೇ.72.67 ರಷ್ಟು (3.85 ಕೋಟಿ) ಮಂದಿ ಮತಚಲಾವಣೆ ಮಾಡಿದ್ದಾರೆ.
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…