ವಿಜ್ಞಾನ ತಂತ್ರಜ್ಞಾನ

ಸೈಬರ್ ವಂಚಕರಿಂದ 363 ಕೋಟಿ ರೂ. ವಂಚನೆ : , ಮೈಸೂರಿಗೆ 2ನೇ ಸ್ಥಾನ

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ

ಬೆಂಗಳೂರು – 266,35,040 ರೂ.
ಮೈಸೂರು –   14,07,03,467 ರೂ.
ಮಂಡ್ಯ –  13,82,22,366 ರೂ.

ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್‍ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ

andolanait

Share
Published by
andolanait

Recent Posts

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

26 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

2 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

2 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

2 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

2 hours ago

ಓದುಗರ ಪತ್ರ: ಪಾದಚಾರಿ ಮಾರ್ಗ ಒತ್ತುವರಿ ತೆರವು ಸ್ವಾಗತಾರ್ಹ

ಬೆಂಗಳೂರಿನ ನಾಗರಿಕರಿಗೆ ಸುರಕ್ಷಿತವಾಗಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕಿದೆ.ಪಾದಚಾರಿ ಮಾರ್ಗಗಳ ಒತ್ತುವರಿ ಎಂದರೆ ನಾಗರಿಕರ ಸುರಕ್ಷತೆ ಕಸಿದುಕೊಂಡಂತೆ. ಇದು ಕೇವಲ…

2 hours ago