ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ
ಬೆಂಗಳೂರು – 266,35,040 ರೂ.
ಮೈಸೂರು – 14,07,03,467 ರೂ.
ಮಂಡ್ಯ – 13,82,22,366 ರೂ.
ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ ವಂಚಕರು ಜನರಿಂದ ನಿತ್ಯ ಸರಾಸರಿ 1 ಕೋಟಿ ರೂ. ಗಳಂತೆ 363 ಕೋಟಿ ಲೂಟಿ ಮಾಡಿದ್ದಾರೆ ಎಂದು ಗೃಹ ಇಲಾಖೆ ಅಂಕಿಅಂಶ ನೀಡಿದೆ. ಅಂತರ್ಜಾಲದ ಮೂಲಕ ನಡೆಯುತ್ತಿರುವ ಸೈಬರ್ ಅಪರಾಧಗಳಲ್ಲಿ ಹಣ ಕಳೆದುಕೊಳ್ಳುತಿರುವುದರಲ್ಲಿ ಶೇಕಡಾ 150 ರಷ್ಟು ಏರಿಕೆಯಾಗಿದೆ ಎಂದು ಹೇಳಿದೆ. ಗೃಹ ಇಲಾಖೆ, 2022 ರಲ್ಲಿ ಕರ್ನಾಟಕವು 363,11,54,443 ರೂ.ಗಳನ್ನು ಕಳೆದುಕೊಂಡಿದೆ,ಅದರಲ್ಲಿ ಶೇ.12 ರಷ್ಟು ವಸೂಲಿ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದಾರೆ.
2023ರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣ ಬಿದ್ದಿಲ್ಲ, ರಾಜ್ಯದಲ್ಲಿ ಜನವರಿಯಲ್ಲಿಯೇ 1,325 ಸೈಬರ್ ಕ್ರೈಮ್ ಪ್ರಕರಣಗಳು ದಾಖಲಾಗಿವೆ, ಅಕೃತ ಅಂಕಿಅಂಶಗಳ ಪ್ರಕಾರ, 266,70,35, 040 ರೂ ಕಳೆದುಕೊಂಡಿದ್ದು ,ಬೆಂಗಳೂರು ಅಗ್ರಸ್ಥಾನದಲ್ಲಿದ್ದರೆ, ಮೈಸೂರು ನಗರ ಎರಡನೇ ಸ್ಥಾನದಲ್ಲಿದೆ (ರೂ 14,07,03,467) ಮತ್ತು ಮಂಡ್ಯ ಜಿ¯್ಲÉ ಮೂರನೇ ಸ್ಥಾನದಲ್ಲಿದೆ (ರೂ 13,82, 22,366) ಎಂದು ತಿಳಿಸಿದೆ.
, ಅಪರಾಧ ವರದಿ ಮಾಡುವಲ್ಲಿ ವಿಳಂಬ,ವಂಚನೆ ಆಪ್ಮತ್ತು ರಾಜ್ಯಗಳ ನಡುವಿನ ಸಮನ್ವಯದ ಕೊರತೆ ಸೇರಿದಂತೆ ವಿವಿಧ ಅಂಶಗಳಿಂದಾಗಿ ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಹಣವನ್ನು ವಸೂಲಿಯೂ ಕಷ್ಟಕರವಾಗಿದೆ.
ಡಿಜಿಟಲ್ ಪಾವತಿ ಹೆಚ್ಚುತ್ತಿರುವ ಅವಲಂಬನೆಯಿಂದಾಗಿ ಸೈಬರ್ ಅಪರಾಧಗಳ ಆಯಾಮವೂ ಬದಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ .
ಮುಂದಿನ ದಿನಗಳಲ್ಲಿ ಇಂಟರ್ನೆಟ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಶಾಲೆಗಳಲ್ಲಿ ಸೈಬರ್ ಶಿಕ್ಷಣವು ತುಂಬಾ ಅವಶ್ಯಕವಾಗಿದೆ
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…