ವಿಜ್ಞಾನ ತಂತ್ರಜ್ಞಾನ

ಕೇವಲ 9,999 ರೂ. ಗೆ ಲಾವಾ ಬ್ಲೆಂಜ್‌ 5G ಫೋನ್‌ ಬಿಡುಗಡೆ

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ  ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್‌ 5ಜಿ ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2022  ಸಮಾವೇಶದಲ್ಲಿ ಕಂಪನಿಯು ಈ ಫೋನ್ ಅನ್ನು ಅನಾವರಣ ಮಾಡಿತ್ತು. ಈ ಸ್ಮಾರ್ಟ್​ಫೋನ್ ದೇಶದ ಅತಿ ಅಗ್ಗದ 5ಜಿ ಫೋನ್ ಎನಿಸಿಕೊಂಡಿದೆ. ಪ್ರಸಿದ್ಧ ಇ ಕಾಮರ್ಸ್ ತಾಣ ಅಮೆಜಾನ್‌ ಮೂಲಕ ಸದ್ಯದಲ್ಲೇ ಮಾರಾಟ ಪ್ರಾರಂಭಿಸಲಿದೆ ಎಂದು ಲಾವಾ ಹೇಳಿಕೆ ನೀಡಿದೆ. ಈ ಫೋನಿನ ಬೆಲೆ, ವಿಶೇಷತೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಕೇವಲ ಒಂದು ಮಾದರಿಯಲ್ಲಷ್ಟೆ ಖರೀದಿಗೆ ಸಿಗಲಿದೆ. ಇದರ 4GB RAM + 128GB ಸ್ಟೋರೇಜ್ ಮಾದರಿಗೆ ಕೇವಲ 9,999ರೂ. ಬೆಲೆಯನ್ನು ನಿಗದಿ ಮಾಡಲಾಗಿದೆ.
  • ನವೆಂಬರ್ 15 ರಂದು ಅಮೆಜಾನ್‌ನಲ್ಲಿ ಮೊದಲ ಸೇಲ್ ಶುರು ಮಾಡಲಿದೆ. ಇದು ಗ್ಲಾಸ್ ಬ್ಲೂ ಮತ್ತು ಗ್ಲಾಸ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಸಿಗಲಿದೆ.
  • ಈ ಫೋನಿನ ಫೀಚರ್ಸ್ ಬಗ್ಗೆ ನೋಡುವುದಾದರೆ, ಇದು 720 x 1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.51 ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. 90Hz ರಿಫ್ರೆಶ್ ದರಕ್ಕೆ ಬೆಂಬಲಿಸುತ್ತದೆ. ವೈಡ್‌ವೈನ್‌ L1 ಬೆಂಬಲವನ್ನು ಕೂಡ ಪಡೆದುಕೊಂಡಿದೆ.
  • 7nm ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4 GB RAM ಮತ್ತು 128GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಹೊಂದಿದೆ.
  • ಲಾವಾ ಬ್ಲೇಜ್‌ 5G ಸ್ಮಾರ್ಟ್‌ಫೋನ್‌ AI- ಬೆಂಬಲಿತ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.
  • ಇದರ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಇದರಲ್ಲಿರುವ ಕ್ಯಾಮೆರಾ ಫೀಚರ್ಸ್‌ಗಳಲ್ಲಿ AI, ಬ್ಯೂಟಿ, ಫಿಲ್ಟರ್‌ಗಳು, GIF, HDR, ಮ್ಯಾಕ್ರೋ, ಮೋಷನ್, ನೈಟ್, ಪನೋರಮಾ, ಪೋರ್ಟ್ರೇಟ್, ಸ್ಲೋ ಮೋಷನ್ ಟೈಮ್‌ಲ್ಯಾಪ್ಸ್ ನಂತಹ ವಿಭಿನ್ನ ಫೀಚರ್ಸ್‌ಗಳನ್ನು ಒಳಗೊಂಡಿದೆ.
  • ದೀರ್ಘ ಸಮಯ ಬಾಳಿಕೆ ಬರುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಸಿಂಗಲ್‌ ಚಾರ್ಜ್‌ನಲ್ಲಿ 50 ಗಂಟೆಗಳ ಟಾಕ್‌ಟೈಮ್ ಮತ್ತು 25 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ.
  • ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, ಬ್ಲೂಟೂತ್ V5.1, GLONASS, 3.5mm ಆಡಿಯೋ ಜ್ಯಾಕ್, Wi-Fi 802.11 b/g/n/ac, GPRS ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.
andolana

Share
Published by
andolana

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

9 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

9 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

10 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

10 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

10 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

11 hours ago