ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ೨೦೨೩ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ಏಪ್ರಿಲ್ ೧ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಬಾರಿ ಗಡುವು ವಿಸ್ತರಿಸಲಾಗಿದ್ದರೂ ಈವರೆಗೆ ಬಹಳಷ್ಟು ಮಂದಿ ತಮ್ಮ ಪಾನ್ ಕಾರ್ಡ್ಗಳನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ರೂಪಾಯಿ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದ್ದು, ಒಂದು ವೇಳೆ ಇದನ್ನು ಸಹ ಸದುಪಯೋಗಪಡಿಸಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಚಿತವಾಗಿದೆ. ಪಾನ್ ಕಾರ್ಡ್ ನಿಷ್ಕ್ರಿಯವಾದರೆ ಬ್ಯಾಂಕ್ ಖಾತೆ ವಹಿವಾಟು ನಡೆಸುವುದೂ ಸೇರಿದಂತೆ ಹಲವು ಕಾರ್ಯಗಳಿಗೆ ತೊಂದರೆಯಾಗಲಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…