ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಯ್ದೆ ೧೯೬೧ರ ಅನ್ವಯ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಇದಕ್ಕಾಗಿ ೨೦೨೩ರ ಮಾರ್ಚ್ ೩೧ ಅಂತಿಮ ದಿನಾಂಕವಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ಏಪ್ರಿಲ್ ೧ರಿಂದ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ.
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಈಗಾಗಲೇ ಹಲವು ಬಾರಿ ಗಡುವು ವಿಸ್ತರಿಸಲಾಗಿದ್ದರೂ ಈವರೆಗೆ ಬಹಳಷ್ಟು ಮಂದಿ ತಮ್ಮ ಪಾನ್ ಕಾರ್ಡ್ಗಳನ್ನು ಆಧಾರ್ ಜೊತೆ ಲಿಂಕ್ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಮಹತ್ವದ ಸೂಚನೆಯನ್ನು ನೀಡಿದೆ.
ಈಗಾಗಲೇ ಹಲವು ಬಾರಿ ಗಡುವು ನೀಡಿದ್ದ ಆದಾಯ ತೆರಿಗೆ ಇಲಾಖೆ ಇದೀಗ ಒಂದು ಸಾವಿರ ರೂಪಾಯಿ ಪಾವತಿಸಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದ್ದು, ಒಂದು ವೇಳೆ ಇದನ್ನು ಸಹ ಸದುಪಯೋಗಪಡಿಸಿಕೊಳ್ಳದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳುವುದು ಖಚಿತವಾಗಿದೆ. ಪಾನ್ ಕಾರ್ಡ್ ನಿಷ್ಕ್ರಿಯವಾದರೆ ಬ್ಯಾಂಕ್ ಖಾತೆ ವಹಿವಾಟು ನಡೆಸುವುದೂ ಸೇರಿದಂತೆ ಹಲವು ಕಾರ್ಯಗಳಿಗೆ ತೊಂದರೆಯಾಗಲಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…