ವಿಜ್ಞಾನ ತಂತ್ರಜ್ಞಾನ

ಎರಡು ನೂತನ ಪ್ಲಾನ್‌ ಪರಿಚಯಿಸಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್‌ ನೀಡಿದ ಬಿಎಸ್‌ಎನ್‌ಎಲ್‌

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಬಿಎಸ್‌ಎನ್ಎಲ್‌ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್‌ ಗಮನ ಸೆಳೆದಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್‌ 1999ರೂ. ಬೆಲೆಯ ವಾರ್ಷಿಕ ಪ್ಲಾನ್‌ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

andolana

Share
Published by
andolana

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

2 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago