ವಿಜ್ಞಾನ ತಂತ್ರಜ್ಞಾನ

ಎರಡು ನೂತನ ಪ್ಲಾನ್‌ ಪರಿಚಯಿಸಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್‌ ನೀಡಿದ ಬಿಎಸ್‌ಎನ್‌ಎಲ್‌

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಬಿಎಸ್‌ಎನ್ಎಲ್‌ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್‌ ಗಮನ ಸೆಳೆದಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್‌ 1999ರೂ. ಬೆಲೆಯ ವಾರ್ಷಿಕ ಪ್ಲಾನ್‌ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

andolana

Share
Published by
andolana

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

45 mins ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

2 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

3 hours ago