ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್ಎನ್ಎಲ್ ಸಾಕಷ್ಟು ಲಾಸ್ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್ಎನ್ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.
ಬಿಎಸ್ಎನ್ಎಲ್ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್ವರ್ಕ್ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್ಎಮ್ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್ಎನ್ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.
769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್ಎಮ್ಎಸ್ ಉಚಿತವಿದೆ. 269 ರೂ. ಪ್ಲಾನ್ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್ಎನ್ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.
ಬಿಎಸ್ಎನ್ಎಲ್ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್ ಗಮನ ಸೆಳೆದಿದೆ. ಈ ಪ್ರಿಪೇಯ್ಡ್ ಪ್ಲಾನ್ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್ಎಲ್ 1999ರೂ. ಬೆಲೆಯ ವಾರ್ಷಿಕ ಪ್ಲಾನ್ ಹೊಂದಿದೆ. ಈ ಪ್ಲಾನ್ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್ಎಂಎಸ್ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…
ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…