ವಿಜ್ಞಾನ ತಂತ್ರಜ್ಞಾನ

ಎರಡು ನೂತನ ಪ್ಲಾನ್‌ ಪರಿಚಯಿಸಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್‌ ನೀಡಿದ ಬಿಎಸ್‌ಎನ್‌ಎಲ್‌

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಬಿಎಸ್‌ಎನ್ಎಲ್‌ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್‌ ಗಮನ ಸೆಳೆದಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್‌ 1999ರೂ. ಬೆಲೆಯ ವಾರ್ಷಿಕ ಪ್ಲಾನ್‌ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

andolana

Share
Published by
andolana

Recent Posts

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಮತ್ತೊಮ್ಮೆ ಶೇ.50 ರಿಯಾಯಿತಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…

3 hours ago

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಫೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ…

4 hours ago

ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ…

5 hours ago

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ…

6 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ ಕೊನೆಗೂ ರಾಜೀನಾಮೆ ಅಂಗೀಕಾರ

ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.…

8 hours ago

ಚಿರತೆ ದಾಳಿಗೆ ಗರ್ಭಿಣಿ ಹೆಮ್ಮೆ ಬಲಿ ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೆ.ಆರ್.ಪೇಟೆ: ತಾಲೂಕಿನ ಕಸಬಾ ಹೋಬಳಿಯ ಮಾಕವಳ್ಳಿ ಗ್ರಾಮದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ತಡರಾತ್ರಿ ನಡೆದ ದಾಳಿಯಲ್ಲಿ ಗರ್ಭಿಣಿ ಹೆಮ್ಮೆ ಸಾವನ್ನಪ್ಪಿದ…

8 hours ago