ವಿಜ್ಞಾನ ತಂತ್ರಜ್ಞಾನ

ಎರಡು ನೂತನ ಪ್ಲಾನ್‌ ಪರಿಚಯಿಸಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಶಾಕ್‌ ನೀಡಿದ ಬಿಎಸ್‌ಎನ್‌ಎಲ್‌

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ ಇತ್ತೀಚೆಗೆ ಪೈಪೋಟಿಗೆ ಬಿದ್ದವರಂತೆ ತಮ್ಮ ಯೋಜನೆಗಳನ್ನು ದುಬಾರಿಗೊಳಿಸಿವೆ. ಜೊತೆಗೆ 5ಜಿ ಸೇವೆಯನ್ನು ಕೂಡ ಪರಿಚಯಿಸುತ್ತಿದೆ. ಹೀಗಿರುವಾಗ ಬಿಎಸ್​ಎನ್​ಎಲ್ ಸದ್ದಿಲ್ಲದೆ ಎರಡು ಹೊಸ ಧಮಾಕ ಯೋಜನೆಗಳನ್ನು ಅನಾವರಣ ಮಾಡಿದೆ.

ಬಿಎಸ್​ಎನ್​ಎಲ್​ 269 ರೂ. ಹಾಗೂ 769 ರೂ. ವಿನ ಎರಡು ಹೊಸ ಪ್ರಿಪೇಯ್ಡ್ ಪ್ಲಾನ್ ಬಿಡುಗಡೆ ಮಾಡಿದೆ. ಅನಿಯಮಿತ ಉಪಯೋಗ ಬಯಸುವವರಿಗೆ ಈ ಯೋಜನೆ ಸಾಕಷ್ಟು ಸಹಕಾರಿ ಆಗಲಿದೆ. 269 ರೂ. ಪ್ಲಾನ್​ನಲ್ಲಿ ದಿನಕ್ಕೆ 2GB ಡೇಟಾ ಪ್ರಯೋಜನ ಸಿಗುತ್ತದೆ. ಯಾವುದೇ ನೆಟ್​ವರ್ಕ್​ಗೆ ಅನಿಯಮಿತ ವಾಯಿಸ್ ಕರೆ ಸೌಲಭ್ಯವಿದೆ. ಜೊತೆಗೆ ಪ್ರತಿದಿನ 100 ಎಸ್​ಎಮ್​ಎಸ್ ಉಚಿತ ಪಡೆಯಬಹುದು. ಇದು 30 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಬಿಎಸ್​ಎನ್​ಎಲ್ ಫ್ರೀ ಟ್ಯೂನ್ ಲಭ್ಯವಿದ್ದು ಇದರ ಮೂಲಕ ನಿಮಗೆ ಬೇಕಾದ ಹಾಡುಗಳನ್ನು ಉಚಿತವಾಗಿ ಹಾಕಬಹುದು. ಇದನ್ನು ಎಷ್ಟು ಬಾರಿ ಬೇಕಾದರೂ ಬದಲಾವಣೆ ಮಾಡಬಹುದಾಗಿದೆ. ಇದರ ಜೊತೆಗೆ ಎರಾಸ್ ನೌ, ಚಾಲೆಂಜೆಸ್ ಡರೇನಾ ಗೇಮ್ಸ್ ಸೇರಿದಂತೆ ಅನೇಕ ಸೌಲಭ್ಯವನ್ನು ಪಡೆಯಬಹುದು.

769 ರೂ. ಪ್ರಿಪೇಯ್ಡ್ ಯೋಜನೆಯಲ್ಲಿ ಕೂಡ ದಿನಕ್ಕೆ 2GB ಡೇಟಾ ಪ್ರಯೋಜನ ಪಡೆಯಬಹುದು. ಅನಿಯಮಿತ ಕರೆ ಸೌಲಭ್ಯ ನೀಡಲಾಗಿದ್ದು 100 ಎಸ್​ಎಮ್​ಎಸ್ ಉಚಿತವಿದೆ. 269 ರೂ. ಪ್ಲಾನ್​ನಲ್ಲಿರುವ ಎಲ್ಲ ಪ್ರಯೋಜನ ಇದರಲ್ಲೂ ಇದೆ. ವ್ಯಾಲಿಡಿಯಲ್ಲಿ ಮಾತ್ರ ವ್ಯತ್ಯಾಸವಿದೆ. ಇದು 90 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಎರಡು ಹೊಸ ಪ್ಲಾನ್ ಈಗಾಗಲೇ ಲೈವ್ ಆಗಿದ್ದು ಆಸಕ್ತ ಬಿಎಸ್​ಎನ್​ಎಲ್ ಬಳಕೆದಾರರು ಆ್ಯಕ್ಟಿವ್ ಮಾಡಬಹುದು.

ಬಿಎಸ್‌ಎನ್ಎಲ್‌ ಟೆಲಿಕಾಂನ ಇತರೆ ದೀರ್ಘಾವಧಿ ಪ್ಲಾನ್‌ಗಳನ್ನು ಪರಿಗಣಿಸುವುದಾದರೆ 1499 ರೂ. ಬೆಲೆಯ ವಾರ್ಷಿಕ ಪ್ಲಾನ್‌ ಗಮನ ಸೆಳೆದಿದೆ. ಈ ಪ್ರಿಪೇಯ್ಡ್‌ ಪ್ಲಾನ್‌ 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಇದು ಉಚಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಪ್ರಯೋಜನ ನೀಡಲಿದೆ. ಇದಲ್ಲದೆ ಬಿಎಸ್ಎನ್‌ಎಲ್‌ 1999ರೂ. ಬೆಲೆಯ ವಾರ್ಷಿಕ ಪ್ಲಾನ್‌ ಹೊಂದಿದೆ. ಈ ಪ್ಲಾನ್‌ನಲ್ಲಿ 100GB ಹೆಚ್ಚುವರಿ ಡೇಟಾದೊಂದಿಗೆ 500GB ನಿಯಮಿತ ಡೇಟಾವನ್ನು ನೀಡುತ್ತದೆ. ಜೊತೆಗೆ ದಿನಕ್ಕೆ 100 ಎಸ್‌ಎಂಎಸ್‌ಗಳನ್ನು ನೀಡುತ್ತದೆ. ಇದು 365 ದಿನಗಳವರೆಗೆ Eros Now ಮನರಂಜನಾ ಸೇವೆಗೆ ಪ್ರವೇಶವನ್ನು ನೀಡುತ್ತದೆ.

andolana

Share
Published by
andolana

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

11 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

20 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

20 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

20 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

20 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

20 hours ago