ವಿಜ್ಞಾನ ತಂತ್ರಜ್ಞಾನ

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: BEL ಜೊತೆ ಒಡಂಬಡಿಕೆ

ಬೆಂಗಳೂರು : ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡರು.

ಒಡಂಬಡಿಕೆ ನಂತರ ಮಾತನಾಡಿದ ಸಚಿವರು, ಬೆಳೆ ಮಾಹಿತಿ, ಹವಾಮಾನ ಮಾಹಿತಿ, FRUITS ದತ್ತಾಂಶ, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಸೇರಿದಂತೆ ಪ್ರಮುಖ ಕೃಷಿ ಮಾಹಿತಿಗಳನ್ನ ಸಮಗ್ರಗೊಳಿಸಿ, ವಿಶ್ಲೇಷಿಸಿ, ರೈತರಿಗೆ ನಿಖರ ಮತ್ತು ತಂತ್ರಜ್ಞಾನ ಆಧಾರಿತ ಸಲಹಾ ಸೇವೆಗಳನ್ನ ಒದಗಿಸಲು ಅನುಕೂಲವಾಗುತ್ತದೆಂದು ತಿಳಿಸಿದರು. ಈ ಹಿಂದೆ ರೈತ ಕರೆ ಕೇಂದ್ರದ ಸಹಾಯವಾಣಿಯ 8 ಬೇರೆ ಬೇರೆ ನಂಬರ್‌ಗಳು ಚಾಲ್ತಿಯಲ್ಲಿತ್ತು. ಇದನ್ನು ಸರಳೀಕರಿಸುವ ಉದ್ದೇಶದಿಂದ ಸಚಿವರು ಏಕ ರೈತ ಕರೆ ಸಹಾಯವಾಣಿ ಕೇಂದ್ರಕ್ಕೆ ಚಾಲನೆ ನೀಡಿದ್ದರು. ಇದೀಗ ಅದಕ್ಕೆ ಮತ್ತಷ್ಟು ಹೈಟೆಕ್( AI) ಸ್ಪರ್ಶ ನೀಡುತ್ತಿರುವ ಸಚಿವರು BEL ಸಂಸ್ಥೆ ಯೊಂದಿಗೆ ಒಡಂಬಡಿಕೆಗೆ ಸಹಿ ಮಾಡಿದರು..

ಒಪ್ಪಂದದ ಪ್ರಮುಖ ಅಂಶಗಳು ಹೀಗಿವೆ ;  ಬಿ.ಇ.ಎಲ್ ಸಂಸ್ಥೆಯ EQUINOX ವೇದಿಕೆಯನ್ನು ಕೃಷಿ ಕ್ಷೇತ್ರಕ್ಕೆ ಹೊಂದಿಸುವುದು. ತಾಂತ್ರಿಕ ಸಲಹೆ ಹಾಗೂ ಮಾಹಿತಿ (ದತ್ತಾಂಶ) ಸಂಯೋಜನೆಗೆ ಬೆಂಬಲ ನೀಡುವುದು.  ಕೇಂದ್ರೀಕೃತ ಡ್ಯಾಶ್‌ಬೋರ್ಡ್ ಗೆ ಕೃಷಿ ಇಲಾಖೆಯು ಕೃಷಿ ಸಂಬಂಧಿತ ಮಾಹಿತಿಗಳು ಸರ್ಕಾರಿ ಯೋಜನೆಗಳು ಮತ್ತು ನೀತಿ ವಿವರಗಳನ್ನ ಒದಗಿಸುತ್ತದೆ.  ಈ ಯೋಜನೆ 2 ಹಂತಗಳಲ್ಲಿ ಜಾರಿಯಾಗುವುದು. ಮೊದಲನೆಯದಾಗಿ ಪ್ರಾಯೋಗಿಕ ಹಂತ (ಒಂದು ವರ್ಷ) ನಂತರ ಪೂರ್ಣ ಪ್ರಮಾಣದಲ್ಲಿ (4 ವರ್ಷ) ಜಾರಿಗೆ ತರುವುದು.  ಈ ಯೋಜನೆ ರಾಜ್ಯ ಸರ್ಕಾರದ ರೈತರ ಬಲವರ್ಧನೆಗೆ ತಂತ್ರಜ್ಞಾನ ಬಳಸುವ ಬದ್ಧತೆಯ ಪ್ರತಿಬಿಂಬವಾಗಿದೆ. ರೈತ ಕರೆ ಕೇಂದ್ರವು ರೈತ ಸ್ನೇಹಿ ಏಕಗವಾಕ್ಷಿ (Singal Widow) ವ್ಯವಸ್ಥೆಯಾಗಿದೆ.  ರೈತರ ಪ್ರಶ್ನೆಗಳಿಗೆ ಒಂದೇ ಸಹಾಯವಾಣಿಯನ್ನು ಒದಗಿಸುವುದು (ಭಾರತ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ) ವಿವಿಧ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವುದು.  ಸುಧಾರಿತ ಸಂವಹನ ಸಾಧನಗಳಾದ ವ್ಯಾಟ್ಸ್ಅಪ್, ಟೆಲಿಗ್ರಾಂ, ಚಾಟ್‌ಬಾಟ್, ವಿಡಿಯೋ ಕರೆ, ವಿಡಿಯೋ/ಆಡಿಯೋ ಕ್ಲಿಪ್‌ಗಳು ಡ್ಯಾಶ್‌ಬೋರ್ಡನ್ನು ಅಭಿವೃದ್ಧಿಪಡಿಸುವುದು ಹಾಗೂ AI ಆಧಾರಿತ ನಿರ್ಧಾರ ಬೆಂಬಲ ವ್ಯವಸ್ಥೆಯನ್ನ ಅಭಿವೃದ್ಧಿಪಡಿಸುವುದು. ಇದೇ ವೇಳೆ ಹವಾಮಾನ ಬದಲಾವಣೆಯಂಥ ಈ ಸಂದರ್ಭದಲ್ಲಿ ಭತ್ತದ ಕೃಷಿಯನ್ನು ವೈಜ್ಞಾನಿಕವಾಗಿ ಬೆಳೆಯಲು ಭತ್ತದ ಕೃಷಿಯಲ್ಲಿ ಹಸಿರು ಮನೆ ಅನಿಲ ಹೊರಸೂಸುವಿಕೆ ತಗ್ಗಿಸಲು ಹಾಗೂ ನೀರನ್ನು ಮಿತವಾಗಿ ಬಳಸಿ ಭತ್ತ ಬೆಳೆಯುವ ಹೊಸ ಯೋಜನೆಗೆ ಸಚಿವರು J-PAL ಸಂಸ್ಥೆಯೊಂದಿಗೆ ಒಡಂಬಡಿಕೆಗೆ ಸಹಿ ಮಾಡಿದರು.

ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ ಆಯ್ದ ಗ್ರ‍್ರಾಮಗಳಲ್ಲಿ 210 ರೈತರ ಜಮೀನಿನಲ್ಲಿ ಪರ್ಯಾಯವಾಗಿ ನೀರು ನಿಲ್ಲಿಸುವ ಮತ್ತು ಒಣಗಿಸುವ ಪ್ರಕ್ರಿಯೆಯ ಹಾಗೂ ಭತ್ತದ ಬೆಳೆಯಲ್ಲಿ ನೇರ ಬಿತ್ತನೆ ತಾಂತ್ರಿಕತೆಯನ್ನು ಅಳವಡಿಸಿ, ಭತ್ತದ ಕೃಷಿ ಮಾಡುವ ಯೋಜನೆಯ ಮಹತ್ವದ ಒಪ್ಪಂದಕ್ಕೆ ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಈ ಯೋಜನೆಗೆ ನೋಂದಣಿ ಮಾಡಿದ ರೈತರಿಗೆ ಎಕರೆಗೆ ರೂ.4000ರ ವರೆಗೆ ಹಾಗೂ 2 ಎಕರೆಗೆ ರೂ.8000ರ ವರೆಗೆ ಸಹಾಯಧನ ನೀಡುವ ಮೂಲಕ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು. ಕೃಷಿ ಇಲಾಖೆ ಆಯುಕ್ತ ವೈ.ಎಸ್. ಪಾಟೀಲ್, ನಿರ್ದೇಶಕ ಜಿ.ಟಿ. ಪುತ್ರ, ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶಕ ವೆಂಕಟರಮಣ ರೆಡ್ಡಿ, BEL ಹಾಗೂ J-PAL ಸಂಸ್ಥೆಯ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪೌರ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸಿ

ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…

4 hours ago

ಓದುಗರ ಪತ್ರ: ಪರೀಕ್ಷೆ ವೇಳೆ ಆರೋಗ್ಯ ಏರುಪೇರಾದರೆ ಬದಲಿ ವ್ಯವಸ್ಥೆ ಕಲ್ಪಿಸಿ

ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…

4 hours ago

ಓದುಗರ ಪತ್ರ: ಅಂಚೆ ಕಚೇರಿ ಚಲನ್‌ಗಳು ಕನ್ನಡದಲ್ಲಿರಲಿ

ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ರಾಜ್ಯ ಸರ್ಕಾರದ ಮೇಲೆ ರಾಜ್ಯಪಾಲರ ಸವಾರಿಗೆ ಬೇಕಿದೆ ಕಡಿವಾಣ

ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…

4 hours ago

ಮೂಗಿನ ನೇರಕ್ಕೆ ಇತಿಹಾಸವನ್ನು ತಿರುಚುವುದಿದೆಯಲ್ಲಾ….

‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…

4 hours ago

ಸಂವಿಧಾನ ನಮ್ಮ ಬಳಿ ಇದೆ, ಆದರೆ ಅದರ ಧ್ವನಿ ಎಲ್ಲಿದೆ?

ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…

4 hours ago