ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್ಗಳಿಗೆ ಸಿಗ್ನಲ್ ತಡೆ ಹಿಡಿದಿವೆ.
ಹೊಸ ಸುಂಕದ ಆದೇಶದ (ಎನ್ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ ಕಾರಣಕ್ಕೆ ವಾಹಿನಿಗಳು ಈ ನಿರ್ಧಾರಕ್ಕೆ ಬಂದಿವೆ.
‘ಎನ್ಟಿಒ’ ಅಡಿಯಲ್ಲಿ ಪರಿಷ್ಕೃತ ದರವು ಶೇಕಡ 25 ರಿಂದ 35ಕ್ಕೆ ಹೆಚ್ಚಳಗೊಳ್ಳುತ್ತದೆ. ಗ್ರಾಹಕರ ಮೇಲೆ ಹೊರೆ ಬೀಳುತ್ತದೆ ಎಂದು ಡಿಜಿಟಲ್ ಕೇಬಲ್ ಟೆಲಿವಿಷನ್ ಆಪರೇಟರ್ಗಳ ಸಂಘ ‘ಆಲ್ ಇಂಡಿಯಾ ಡಿಜಿಟಲ್ ಕೇಬಲ್ ಫೆಡರೇಶನ್ (ಎಐಡಿಸಿಎಫ್)’ ಆರೋಪಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದೆ.
ಪರಿಷ್ಕೃತ ದರಕ್ಕೆ ಸಹಿ ಹಾಕುವಂತೆ ಮನರಂಜನಾ ವಾಹಿನಿಗಳು ಫೆ.15 ರಂದು ಕೇಬಲ್ ಆಪರೇಟರ್ಗಳು/ಮಲ್ಟಿ ಸಿಸ್ಟಮ್ ಆಪರೇಟರ್ಗಳಿಗೆ ನೋಟಿಸ್ ಜಾರಿ ಮಾಡಿದ್ದವು. ಆದರೆ, ಕೇಬಲ್ ಆಪರೇಟರ್ಗಳು ನೋಟಿಸ್ ಅನ್ನು ನಿರ್ಲಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಮನರಂಜನಾ ವಾಹಿನಿಗಳು ಸಿಗ್ನಲ್ ನಿಲ್ಲಿಸಿವೆ. ವಾಹಿನಿಗಳ ಈ ಕ್ರಮದಿಂದಾಗಿ ದೇಶದಾದ್ಯಂತ ಸುಮಾರು 4.5 ಕೋಟಿ ಕೇಬಲ್ ಟಿವಿ ಕುಟುಂಬಗಳಿಗೆ ಸೇವೆಯಲ್ಲಿ ಅಡಚಣೆಯಾಗಿದೆ.
‘ಮನರಂಜನಾ ವಾಹಿಗಳು ಪ್ರಸ್ತಾಪಿಸಿದ ಪರಿಷ್ಕೃತ ದರದಲ್ಲಿ ವಿಪರೀತ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಶೇ 60ರಷ್ಟು ಹೊರಾಂಗಲಿದೆ’ ಎಂದು ಕೇಬಲ ಟಿ.ವಿ ಆಪರೇಟರ್ಗಳು ಹೇಳಿದ್ದಾರೆ.
ಫೆಬ್ರುವರಿಯಲ್ಲಿ ಜಾರಿಗೆ ಬಂದಿರುವ ಎನ್ಟಿಒ 3.0ರಲ್ಲಿ ಜನಪ್ರಿಯ ವಾಹಿನಿಗಳ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳವಾಗಿದೆ.
ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು…
ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಐದು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವವನ್ನು…
ರಾಜ್ಯದ ಐದು ಎಸ್ಕಾಂಗಳು ಸುಮಾರು ರೂ.೪,೫೦೦ ಕೋಟಿ ನಷ್ಟದ ನೆಪವೊಡ್ಡಿ ಪ್ರತಿ ಯೂನಿಟ್ಗೆ ೯೯ ಪೈಸೆಯವರೆಗೆ ದರ ಏರಿಕೆಗೆ ಪ್ರಸ್ತಾವನೆ…