ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್ಗಳಿಗೆ ಸಿಗ್ನಲ್ ತಡೆ ಹಿಡಿದಿವೆ.
ಹೊಸ ಸುಂಕದ ಆದೇಶದ (ಎನ್ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ ಕಾರಣಕ್ಕೆ ವಾಹಿನಿಗಳು ಈ ನಿರ್ಧಾರಕ್ಕೆ ಬಂದಿವೆ.
‘ಎನ್ಟಿಒ’ ಅಡಿಯಲ್ಲಿ ಪರಿಷ್ಕೃತ ದರವು ಶೇಕಡ 25 ರಿಂದ 35ಕ್ಕೆ ಹೆಚ್ಚಳಗೊಳ್ಳುತ್ತದೆ. ಗ್ರಾಹಕರ ಮೇಲೆ ಹೊರೆ ಬೀಳುತ್ತದೆ ಎಂದು ಡಿಜಿಟಲ್ ಕೇಬಲ್ ಟೆಲಿವಿಷನ್ ಆಪರೇಟರ್ಗಳ ಸಂಘ ‘ಆಲ್ ಇಂಡಿಯಾ ಡಿಜಿಟಲ್ ಕೇಬಲ್ ಫೆಡರೇಶನ್ (ಎಐಡಿಸಿಎಫ್)’ ಆರೋಪಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದೆ.
ಪರಿಷ್ಕೃತ ದರಕ್ಕೆ ಸಹಿ ಹಾಕುವಂತೆ ಮನರಂಜನಾ ವಾಹಿನಿಗಳು ಫೆ.15 ರಂದು ಕೇಬಲ್ ಆಪರೇಟರ್ಗಳು/ಮಲ್ಟಿ ಸಿಸ್ಟಮ್ ಆಪರೇಟರ್ಗಳಿಗೆ ನೋಟಿಸ್ ಜಾರಿ ಮಾಡಿದ್ದವು. ಆದರೆ, ಕೇಬಲ್ ಆಪರೇಟರ್ಗಳು ನೋಟಿಸ್ ಅನ್ನು ನಿರ್ಲಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಮನರಂಜನಾ ವಾಹಿನಿಗಳು ಸಿಗ್ನಲ್ ನಿಲ್ಲಿಸಿವೆ. ವಾಹಿನಿಗಳ ಈ ಕ್ರಮದಿಂದಾಗಿ ದೇಶದಾದ್ಯಂತ ಸುಮಾರು 4.5 ಕೋಟಿ ಕೇಬಲ್ ಟಿವಿ ಕುಟುಂಬಗಳಿಗೆ ಸೇವೆಯಲ್ಲಿ ಅಡಚಣೆಯಾಗಿದೆ.
‘ಮನರಂಜನಾ ವಾಹಿಗಳು ಪ್ರಸ್ತಾಪಿಸಿದ ಪರಿಷ್ಕೃತ ದರದಲ್ಲಿ ವಿಪರೀತ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಶೇ 60ರಷ್ಟು ಹೊರಾಂಗಲಿದೆ’ ಎಂದು ಕೇಬಲ ಟಿ.ವಿ ಆಪರೇಟರ್ಗಳು ಹೇಳಿದ್ದಾರೆ.
ಫೆಬ್ರುವರಿಯಲ್ಲಿ ಜಾರಿಗೆ ಬಂದಿರುವ ಎನ್ಟಿಒ 3.0ರಲ್ಲಿ ಜನಪ್ರಿಯ ವಾಹಿನಿಗಳ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳವಾಗಿದೆ.
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…