ವಿಜ್ಞಾನ ತಂತ್ರಜ್ಞಾನ

ಸಿಗ್ನಲ್ ತಡೆಹಿಡಿದ ಡಿಸ್ನಿ ಸ್ಟಾರ್, ಝೀ, ಸೋನಿ

ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್‌ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್‌ಗಳಿಗೆ ಸಿಗ್ನಲ್ ತಡೆ ಹಿಡಿದಿವೆ.
ಹೊಸ ಸುಂಕದ ಆದೇಶದ (ಎನ್‌ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ ಕಾರಣಕ್ಕೆ ವಾಹಿನಿಗಳು ಈ ನಿರ್ಧಾರಕ್ಕೆ ಬಂದಿವೆ.
‘ಎನ್‌ಟಿಒ’ ಅಡಿಯಲ್ಲಿ ಪರಿಷ್ಕೃತ ದರವು ಶೇಕಡ 25  ರಿಂದ 35ಕ್ಕೆ ಹೆಚ್ಚಳಗೊಳ್ಳುತ್ತದೆ. ಗ್ರಾಹಕರ ಮೇಲೆ ಹೊರೆ ಬೀಳುತ್ತದೆ ಎಂದು ಡಿಜಿಟಲ್ ಕೇಬಲ್ ಟೆಲಿವಿಷನ್ ಆಪರೇಟರ್‌ಗಳ ಸಂಘ ‘ಆಲ್ ಇಂಡಿಯಾ ಡಿಜಿಟಲ್ ಕೇಬಲ್ ಫೆಡರೇಶನ್ (ಎಐಡಿಸಿಎಫ್)’ ಆರೋಪಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದೆ.
ಪರಿಷ್ಕೃತ ದರಕ್ಕೆ ಸಹಿ ಹಾಕುವಂತೆ ಮನರಂಜನಾ ವಾಹಿನಿಗಳು ಫೆ.15 ರಂದು ಕೇಬಲ್ ಆಪರೇಟರ್‌ಗಳು/ಮಲ್ಟಿ ಸಿಸ್ಟಮ್ ಆಪರೇಟರ್‌ಗಳಿಗೆ ನೋಟಿಸ್ ಜಾರಿ ಮಾಡಿದ್ದವು. ಆದರೆ, ಕೇಬಲ್ ಆಪರೇಟರ್‌ಗಳು ನೋಟಿಸ್ ಅನ್ನು ನಿರ್ಲಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಮನರಂಜನಾ ವಾಹಿನಿಗಳು ಸಿಗ್ನಲ್ ನಿಲ್ಲಿಸಿವೆ. ವಾಹಿನಿಗಳ ಈ ಕ್ರಮದಿಂದಾಗಿ ದೇಶದಾದ್ಯಂತ ಸುಮಾರು 4.5 ಕೋಟಿ ಕೇಬಲ್ ಟಿವಿ ಕುಟುಂಬಗಳಿಗೆ ಸೇವೆಯಲ್ಲಿ ಅಡಚಣೆಯಾಗಿದೆ.
‘ಮನರಂಜನಾ ವಾಹಿಗಳು ಪ್ರಸ್ತಾಪಿಸಿದ ಪರಿಷ್ಕೃತ ದರದಲ್ಲಿ ವಿಪರೀತ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಶೇ 60ರಷ್ಟು ಹೊರಾಂಗಲಿದೆ’ ಎಂದು ಕೇಬಲ ಟಿ.ವಿ ಆಪರೇಟರ್‌ಗಳು ಹೇಳಿದ್ದಾರೆ.
ಫೆಬ್ರುವರಿಯಲ್ಲಿ ಜಾರಿಗೆ ಬಂದಿರುವ ಎನ್‌ಟಿಒ 3.0ರಲ್ಲಿ ಜನಪ್ರಿಯ ವಾಹಿನಿಗಳ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳವಾಗಿದೆ.

andolanait

Share
Published by
andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

9 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

9 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

9 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

9 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

9 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

9 hours ago