ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್ಗಳಿಗೆ ಸಿಗ್ನಲ್ ತಡೆ ಹಿಡಿದಿವೆ.
ಹೊಸ ಸುಂಕದ ಆದೇಶದ (ಎನ್ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ ಕಾರಣಕ್ಕೆ ವಾಹಿನಿಗಳು ಈ ನಿರ್ಧಾರಕ್ಕೆ ಬಂದಿವೆ.
‘ಎನ್ಟಿಒ’ ಅಡಿಯಲ್ಲಿ ಪರಿಷ್ಕೃತ ದರವು ಶೇಕಡ 25 ರಿಂದ 35ಕ್ಕೆ ಹೆಚ್ಚಳಗೊಳ್ಳುತ್ತದೆ. ಗ್ರಾಹಕರ ಮೇಲೆ ಹೊರೆ ಬೀಳುತ್ತದೆ ಎಂದು ಡಿಜಿಟಲ್ ಕೇಬಲ್ ಟೆಲಿವಿಷನ್ ಆಪರೇಟರ್ಗಳ ಸಂಘ ‘ಆಲ್ ಇಂಡಿಯಾ ಡಿಜಿಟಲ್ ಕೇಬಲ್ ಫೆಡರೇಶನ್ (ಎಐಡಿಸಿಎಫ್)’ ಆರೋಪಿಸಿದ್ದು, ಒಪ್ಪಂದಕ್ಕೆ ಸಹಿ ಹಾಕಲು ನಿರಾಕರಿಸಿದೆ.
ಪರಿಷ್ಕೃತ ದರಕ್ಕೆ ಸಹಿ ಹಾಕುವಂತೆ ಮನರಂಜನಾ ವಾಹಿನಿಗಳು ಫೆ.15 ರಂದು ಕೇಬಲ್ ಆಪರೇಟರ್ಗಳು/ಮಲ್ಟಿ ಸಿಸ್ಟಮ್ ಆಪರೇಟರ್ಗಳಿಗೆ ನೋಟಿಸ್ ಜಾರಿ ಮಾಡಿದ್ದವು. ಆದರೆ, ಕೇಬಲ್ ಆಪರೇಟರ್ಗಳು ನೋಟಿಸ್ ಅನ್ನು ನಿರ್ಲಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಮನರಂಜನಾ ವಾಹಿನಿಗಳು ಸಿಗ್ನಲ್ ನಿಲ್ಲಿಸಿವೆ. ವಾಹಿನಿಗಳ ಈ ಕ್ರಮದಿಂದಾಗಿ ದೇಶದಾದ್ಯಂತ ಸುಮಾರು 4.5 ಕೋಟಿ ಕೇಬಲ್ ಟಿವಿ ಕುಟುಂಬಗಳಿಗೆ ಸೇವೆಯಲ್ಲಿ ಅಡಚಣೆಯಾಗಿದೆ.
‘ಮನರಂಜನಾ ವಾಹಿಗಳು ಪ್ರಸ್ತಾಪಿಸಿದ ಪರಿಷ್ಕೃತ ದರದಲ್ಲಿ ವಿಪರೀತ ಏರಿಕೆಯಾಗಿದೆ. ಇದರಿಂದ ಗ್ರಾಹಕರಿಗೆ ಶೇ 60ರಷ್ಟು ಹೊರಾಂಗಲಿದೆ’ ಎಂದು ಕೇಬಲ ಟಿ.ವಿ ಆಪರೇಟರ್ಗಳು ಹೇಳಿದ್ದಾರೆ.
ಫೆಬ್ರುವರಿಯಲ್ಲಿ ಜಾರಿಗೆ ಬಂದಿರುವ ಎನ್ಟಿಒ 3.0ರಲ್ಲಿ ಜನಪ್ರಿಯ ವಾಹಿನಿಗಳ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳವಾಗಿದೆ.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…