ವಿಜ್ಞಾನ ತಂತ್ರಜ್ಞಾನ

ಡ್ರೋನಿ ಹೆಸರಿನ ಡ್ರೋನ್ ಕ್ಯಾಮೆರಾ ಲಾಂಚ್‌ ಮಾಡಿದ ಧೋನಿ

ಚೆನ್ನೈ: ಹೆಲಿಕಾಪ್ಟರ್ ಶಾಟ್​ ಬ್ಯಾಟಿಂಗ್​​ಗೆ ಹೆಸರಾಗಿರುವ ಕ್ರಿಕೆಟರ್ ಮಹೇಂದ್ರ ಸಿಂಗ್ ಧೋನಿ ಗ್ರಾಹಕರು ಬಳಸಬಹುದಾದ ಡ್ರೋನ್ ಕ್ಯಾಮೆರಾವೊಂದನ್ನು ಲಾಂಚ್‌ ಮಾಡಿದ್ದಾರೆ. ವಿಶೇಷವೆಂದರೆ ಇದಕ್ಕೆ ಡ್ರೋನಿ ಎಂದು ಹೆಸರಿಡಲಾಗಿದೆ. ನಗರ ಮೂಲದ ಡ್ರೋನ್ ಸ್ಟಾರ್ಟ್‌ಅಪ್ ಗರುಡಾ ಏರೋಸ್ಪೇಸ್‌ ಇದನ್ನು ತಯಾರಿಸಿದೆ. ಡ್ರೋನಿ ಡ್ರೋನ್ ಇದು ಕ್ವಾಡ್‌ಕಾಪ್ಟರ್ ಕ್ಯಾಮೆರಾ ಡ್ರೋನ್ ಆಗಿದೆ.
ಕಂಪನಿಯ ಸಂಸ್ಥಾಪಕ ಮತ್ತು ಸಿಇಒ ಅಗ್ನಿಶ್ವರ್ ಜಯಪ್ರಕಾಶ್ ಪ್ರಕಾರ, ಡ್ರೋನ್ ಅನ್ನು ವಿವಿಧ ಕಣ್ಗಾವಲು ಉದ್ದೇಶಗಳಿಗಾಗಿ ಬಳಸಬಹುದು ಮತ್ತು 2022 ರ ಅಂತ್ಯದ ವೇಳೆಗೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಗರುಡ ಏರೋಸ್ಪೇಸ್ ಭಾನುವಾರ ಕೃಷಿ ಕೀಟನಾಶಕ ಸಿಂಪಡಣೆಗೆ ಬಳಸುವ ಬ್ಯಾಟರಿ ಚಾಲಿತ ಹೊಸ ಕಿಸಾನ್ ಡ್ರೋನ್ ಅನ್ನು ಬಿಡುಗಡೆ ಮಾಡಿದೆ. ದಿನಕ್ಕೆ 30 ಎಕರೆಗಳಷ್ಟು ಭೂಪ್ರದೇಶದಲ್ಲಿ ಇದನ್ನು ಬಳಸಿ ಕೀಟನಾಶಕ ಸಿಂಪಡಿಸಬಹುದು.

ಡ್ರೋನ್ ಮಾನವರಹಿತ ವೈಮಾನಿಕ ವಾಹನವಾಗಿದೆ (UAV). ಇದನ್ನು ವಿವಿಧ ಉದ್ದೇಶಗಳಿಗಾಗಿ ದೂರದಿಂದಲೇ ನಿಯಂತ್ರಿಸಬಹುದು. ಡ್ರೋನ್‌ಗಳು ಸಾಮಾನ್ಯವಾಗಿ ಮಿಲಿಟರಿ ಕಾರ್ಯಾಚರಣೆಗಳು ಮತ್ತು ಕಣ್ಗಾವಲುಗಳೊಂದಿಗೆ ಸಂಬಂಧ ಹೊಂದಿವೆ. ಆದಾಗ್ಯೂ, ಈ ಸಣ್ಣ ಮಾನವರಹಿತ ರೋಬೋಟ್‌ಗಳನ್ನು ವಿಡಿಯೋ ಕ್ಯಾಮೆರಾ ಸಾಧನಗಳೊಂದಿಗೆ ಸಜ್ಜುಗೊಳಿಸುವ ಮೂಲಕ, ಇವನ್ನು ವಾಣಿಜ್ಯ ಮತ್ತು ವೈಯಕ್ತಿಕ ವಿಷಯಗಳಲ್ಲಿ ಬಳಕೆ ಮಾಡಲಾಗುತ್ತಿದೆ.

andolanait

Share
Published by
andolanait

Recent Posts

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago