ವಿಜ್ಞಾನ ತಂತ್ರಜ್ಞಾನ

ದೇಶಾದ್ಯಂತ ಗೂಗಲ್‌ ಮೀಟ್‌ ಸರ್ವರ್‌ ಡೌನ್‌ : ಬಳಕೆದಾರರ ಪರದಾಟ

ಮೈಸೂರು : ಜನಪ್ರಿಯ ಆನ್‌ಲೈನ್‌ ವೀಡಿಯೊ ಕರೆ ಮತ್ತು ಮೀಟಿಂಗ್‌ ಫ್ಲಾಟ್‌ ಫಾಂ ಗೂಗಲ್‌ ಮೀಟ್‌ ಸರ್ವರ್‌ ಡೌನ್‌ ಆಗಿದ್ದು, ಲಕ್ಷಾಂತರ ಬಳಕೆದಾರರು ಆನ್‌ಲೈನ್ ಸಭೆಗಳಿಗೆ ಸೇರಲು ಸಾಧ್ಯವಾಗದೆ ತೊಂದರೆ ಅನುಭವಿಸಿದ್ದಾರೆ.

ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 65% ಬಳಕೆದಾರರು ಗೂಗಲ್ ಮೀಟ್ ಬಳಸಲು ಅಸಾಧ್ಯವಾಗಿದೆ. ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟಿಂಗ್‌ಗೆ ಸೇರಲು ಪ್ರಯತ್ನಿಸಿದಾಗ ಹಲವರಿಗೆ “503 Error’ ಎಂಬ ಸಂದೇಶ ಕಾಣಿಸಿಕೊಂಡಿದೆ. ಈ ಸ್ಥಗಿತದಿಂದಾಗಿ ಕೆಲಸಕ್ಕೆ ಸಂಬಂಧಿಸಿದ ತುರ್ತು ಕರೆಗಳು, ಆನ್‌ಲೈನ್ ತರಗತಿಗಳು ಮತ್ತು ವರ್ಚುವಲ್ ಈವೆಂಟ್‌ಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

ಇದನ್ನು ಓದಿ: ಅಧಿಕಾರ ಹಂಚಿಕೆ ಚರ್ಚೆ : ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ; ಸಚಿವ ಚಲುವರಾಯಸ್ವಾಮಿ

ಮುಖ್ಯ ಸಮಸ್ಯೆಗಳು:
ಸರ್ವರ್ ಸಮಸ್ಯೆ: ಹಲವು ಬಳಕೆದಾರರಿಗೆ ಸಂಪೂರ್ಣವಾಗಿ ಸರ್ವರ್ ಡೌನ್ ಆಗಿ, ಲಾಗಿನ್ ಆಗುವುದೂ ಕಷ್ಟವಾಗಿದೆ.

503 Error: ವೆಬ್‌ಸೈಟ್ ಮೂಲಕ ಮೀಟಿಂಗ್ ತೆರೆಯಲು ಪ್ರಯತ್ನಿಸಿದಾಗ ಈ ನಿರ್ದಿಷ್ಟ ದೋಷ ಕೋಡ್ ಬಂದಿದೆ. ವಿಡಿಯೋ ಗುಣಮಟ್ಟದ ಕುಸಿತ: ಕೆಲವು ಬಳಕೆದಾರರಿಗೆ ವಿಡಿಯೋ ಗುಣಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.

ಭಾರತದಲ್ಲಿ ಒಂದೇ ದಿನದಲ್ಲಿ 1,700ಕ್ಕೂ ಅಧಿಕ ಜನರು ಈ ಸಮಸ್ಯೆಯನ್ನು ವರದಿ ಮಾಡಿದ್ದಾರೆ. ಇದು ಭಾರತದ ಹೊರತಾಗಿ ಕೆಲ ವಿದೇಶಗಳಲ್ಲಿಯೂ ಮೀಟ್ ಸೇವೆಯಲ್ಲಿ ಅಡಚಣೆ ಉಂಟುಮಾಡಿದೆ ಎಂದು ವರದಿಯಾಗಿದೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

7 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

8 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

8 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

8 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

9 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

9 hours ago