ವಿಜ್ಞಾನ ತಂತ್ರಜ್ಞಾನ

ದೇಶಾದ್ಯಂತ ಗೂಗಲ್‌ ಮೀಟ್‌ ಸರ್ವರ್‌ ಡೌನ್‌ : ಬಳಕೆದಾರರ ಪರದಾಟ

ಮೈಸೂರು : ಜನಪ್ರಿಯ ಆನ್‌ಲೈನ್‌ ವೀಡಿಯೊ ಕರೆ ಮತ್ತು ಮೀಟಿಂಗ್‌ ಫ್ಲಾಟ್‌ ಫಾಂ ಗೂಗಲ್‌ ಮೀಟ್‌ ಸರ್ವರ್‌ ಡೌನ್‌ ಆಗಿದ್ದು, ಲಕ್ಷಾಂತರ ಬಳಕೆದಾರರು ಆನ್‌ಲೈನ್ ಸಭೆಗಳಿಗೆ ಸೇರಲು ಸಾಧ್ಯವಾಗದೆ ತೊಂದರೆ ಅನುಭವಿಸಿದ್ದಾರೆ.

ಲಭ್ಯವಿರುವ ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 65% ಬಳಕೆದಾರರು ಗೂಗಲ್ ಮೀಟ್ ಬಳಸಲು ಅಸಾಧ್ಯವಾಗಿದೆ. ಬಳಕೆದಾರರು ವೆಬ್‌ಸೈಟ್ ಮೂಲಕ ಮೀಟಿಂಗ್‌ಗೆ ಸೇರಲು ಪ್ರಯತ್ನಿಸಿದಾಗ ಹಲವರಿಗೆ “503 Error’ ಎಂಬ ಸಂದೇಶ ಕಾಣಿಸಿಕೊಂಡಿದೆ. ಈ ಸ್ಥಗಿತದಿಂದಾಗಿ ಕೆಲಸಕ್ಕೆ ಸಂಬಂಧಿಸಿದ ತುರ್ತು ಕರೆಗಳು, ಆನ್‌ಲೈನ್ ತರಗತಿಗಳು ಮತ್ತು ವರ್ಚುವಲ್ ಈವೆಂಟ್‌ಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.

ಇದನ್ನು ಓದಿ: ಅಧಿಕಾರ ಹಂಚಿಕೆ ಚರ್ಚೆ : ಹೈಕಮಾಂಡ್‌ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ; ಸಚಿವ ಚಲುವರಾಯಸ್ವಾಮಿ

ಮುಖ್ಯ ಸಮಸ್ಯೆಗಳು:
ಸರ್ವರ್ ಸಮಸ್ಯೆ: ಹಲವು ಬಳಕೆದಾರರಿಗೆ ಸಂಪೂರ್ಣವಾಗಿ ಸರ್ವರ್ ಡೌನ್ ಆಗಿ, ಲಾಗಿನ್ ಆಗುವುದೂ ಕಷ್ಟವಾಗಿದೆ.

503 Error: ವೆಬ್‌ಸೈಟ್ ಮೂಲಕ ಮೀಟಿಂಗ್ ತೆರೆಯಲು ಪ್ರಯತ್ನಿಸಿದಾಗ ಈ ನಿರ್ದಿಷ್ಟ ದೋಷ ಕೋಡ್ ಬಂದಿದೆ. ವಿಡಿಯೋ ಗುಣಮಟ್ಟದ ಕುಸಿತ: ಕೆಲವು ಬಳಕೆದಾರರಿಗೆ ವಿಡಿಯೋ ಗುಣಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.

ಭಾರತದಲ್ಲಿ ಒಂದೇ ದಿನದಲ್ಲಿ 1,700ಕ್ಕೂ ಅಧಿಕ ಜನರು ಈ ಸಮಸ್ಯೆಯನ್ನು ವರದಿ ಮಾಡಿದ್ದಾರೆ. ಇದು ಭಾರತದ ಹೊರತಾಗಿ ಕೆಲ ವಿದೇಶಗಳಲ್ಲಿಯೂ ಮೀಟ್ ಸೇವೆಯಲ್ಲಿ ಅಡಚಣೆ ಉಂಟುಮಾಡಿದೆ ಎಂದು ವರದಿಯಾಗಿದೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

2 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

9 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

9 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

9 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

9 hours ago