ವಿಜ್ಞಾನ ತಂತ್ರಜ್ಞಾನ

ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ

ನವದೆಹಲಿ : ಡೀಪ್ ಫೇಕ್ ನಂತಹ ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಜನರು ಡೀಪ್ ಫೇಕ್ ನಂತಹ ತಂತ್ರಜ್ಞಾನಗಳಿಂದ  ನೋವುಂಡಿದ್ದರೆ ಐಟಿ ನಿಯಮಗಳ ಉಲ್ಲಂಘನೆಗಾಗಿ  ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಗಳ ವಿರುದ್ಧ  ಎಫ್ ಐ ಆರ್ ದಾಖಲಿಸಲು  ಸರ್ಕಾರವು ಜನರಿಗೆ ನೆರವಾಗಲಿದೆ.

ಈ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ  ರಾಜ್ಯ ಸಚಿವ ರಾಜೀವ್  ಚಂದ್ರಶೇಖರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಳಕೆದಾರರು ಸೋಶಿಯಲ್ ಮೀಡಿಯಾ  ಪ್ಲಾಟ್ಫಾರ್ಮ್ ಮೂಲಕ  ಐಟಿ ನಿಯಮಗಳ ಉಲ್ಲಂಘನೆ  ಬಗೆಗಿನ ಮಾಹಿತಿ ತಿಳಿಸಲು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ ನಿಯಮಗಳ ಉಲ್ಲಂಘನೆಗೆ  ಶೂನ್ಯ ಸಹಿಷ್ಣುತೆ  ಇದೆ.

ಮಧ್ಯವರ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಮತ್ತು  ಕಂಟೆಂಟ್ ಎಲ್ಲಿಂದ ಬಂದಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದರೆ ವಿಷಯವನ್ನು ಪೋಸ್ಟ್ ಮಾಡಿದ ಘಟಕದ ವಿರುದ್ಧ  ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸಂಚಲನ ಮೂಡಿಸಿತ್ತು. ಕೊಡಗಿನ ಬೆಡಗಿಯ ಬಳಿಕ, ಬಿ ಟೌನ್ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ   ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Share
Published by
lokesh

Recent Posts

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

42 mins ago

ಮೈಮುಲ್ : ಆಡಳಿತಾಧಿಕಾರಿ ನೇಮಕಕ್ಕೆ ಹೈ ತಡೆ

ಚುನಾವಣೆ ನಡೆಯುವ ತನಕ ಹಾಲಿ ಆಡಳಿತ ಮಂಡಳಿ ಮುಂದುವರಿಕೆ ಕೆ.ಬಿ.ರಮೇಶನಾಯಕ ಮೈಸೂರು: ಐದು ವರ್ಷಗಳ ಅವಧಿ ಮುಗಿದ ಮೈಸೂರು ಜಿಲ್ಲಾ…

48 mins ago

ಶಾಲಾ ಮಕ್ಕಳಿದ್ದ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : 9 ಮಕ್ಕಳಿಗೆ ಪೆಟ್ಟು

ಗುಂಡ್ಲುಪೇಟೆ : ತಾಲ್ಲೂಕಿನ ಚಿಕ್ಕತುಪ್ಪೂರು ಗೇಟ್ ಬಳಿ ಶಾಲಾ ಮಕ್ಕಳನ್ನು ಕರೆದೋಯ್ಯುತಿದ್ದ ಟಾಟಾ ಏಸ್ ವಾಹನಕ್ಕೆ ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ…

1 hour ago

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

14 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

16 hours ago