ವಿಜ್ಞಾನ ತಂತ್ರಜ್ಞಾನ

ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ

ನವದೆಹಲಿ : ಡೀಪ್ ಫೇಕ್ ನಂತಹ ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಜನರು ಡೀಪ್ ಫೇಕ್ ನಂತಹ ತಂತ್ರಜ್ಞಾನಗಳಿಂದ  ನೋವುಂಡಿದ್ದರೆ ಐಟಿ ನಿಯಮಗಳ ಉಲ್ಲಂಘನೆಗಾಗಿ  ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಗಳ ವಿರುದ್ಧ  ಎಫ್ ಐ ಆರ್ ದಾಖಲಿಸಲು  ಸರ್ಕಾರವು ಜನರಿಗೆ ನೆರವಾಗಲಿದೆ.

ಈ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ  ರಾಜ್ಯ ಸಚಿವ ರಾಜೀವ್  ಚಂದ್ರಶೇಖರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಳಕೆದಾರರು ಸೋಶಿಯಲ್ ಮೀಡಿಯಾ  ಪ್ಲಾಟ್ಫಾರ್ಮ್ ಮೂಲಕ  ಐಟಿ ನಿಯಮಗಳ ಉಲ್ಲಂಘನೆ  ಬಗೆಗಿನ ಮಾಹಿತಿ ತಿಳಿಸಲು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ ನಿಯಮಗಳ ಉಲ್ಲಂಘನೆಗೆ  ಶೂನ್ಯ ಸಹಿಷ್ಣುತೆ  ಇದೆ.

ಮಧ್ಯವರ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಮತ್ತು  ಕಂಟೆಂಟ್ ಎಲ್ಲಿಂದ ಬಂದಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದರೆ ವಿಷಯವನ್ನು ಪೋಸ್ಟ್ ಮಾಡಿದ ಘಟಕದ ವಿರುದ್ಧ  ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸಂಚಲನ ಮೂಡಿಸಿತ್ತು. ಕೊಡಗಿನ ಬೆಡಗಿಯ ಬಳಿಕ, ಬಿ ಟೌನ್ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ   ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Share
Published by
lokesh

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

1 hour ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

2 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

3 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago