ವಿಜ್ಞಾನ ತಂತ್ರಜ್ಞಾನ

ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ

ನವದೆಹಲಿ : ಡೀಪ್ ಫೇಕ್ ನಂತಹ ಅಕ್ಷೇಪರ್ಹ ತಂತ್ರಜ್ಞಾನಗಳಿಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.

ಜನರು ಡೀಪ್ ಫೇಕ್ ನಂತಹ ತಂತ್ರಜ್ಞಾನಗಳಿಂದ  ನೋವುಂಡಿದ್ದರೆ ಐಟಿ ನಿಯಮಗಳ ಉಲ್ಲಂಘನೆಗಾಗಿ  ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಗಳ ವಿರುದ್ಧ  ಎಫ್ ಐ ಆರ್ ದಾಖಲಿಸಲು  ಸರ್ಕಾರವು ಜನರಿಗೆ ನೆರವಾಗಲಿದೆ.

ಈ ಕುರಿತು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ  ರಾಜ್ಯ ಸಚಿವ ರಾಜೀವ್  ಚಂದ್ರಶೇಖರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬಳಕೆದಾರರು ಸೋಶಿಯಲ್ ಮೀಡಿಯಾ  ಪ್ಲಾಟ್ಫಾರ್ಮ್ ಮೂಲಕ  ಐಟಿ ನಿಯಮಗಳ ಉಲ್ಲಂಘನೆ  ಬಗೆಗಿನ ಮಾಹಿತಿ ತಿಳಿಸಲು ಎಲೆಕ್ಟ್ರಾನಿಕ್ಸ್ ಮತ್ತು  ಐಟಿ ನಿಯಮಗಳ ಉಲ್ಲಂಘನೆಗೆ  ಶೂನ್ಯ ಸಹಿಷ್ಣುತೆ  ಇದೆ.

ಮಧ್ಯವರ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಮತ್ತು  ಕಂಟೆಂಟ್ ಎಲ್ಲಿಂದ ಬಂದಿದೆ ಎಂಬ ವಿಷಯವನ್ನು ಬಹಿರಂಗಪಡಿಸಿದರೆ ವಿಷಯವನ್ನು ಪೋಸ್ಟ್ ಮಾಡಿದ ಘಟಕದ ವಿರುದ್ಧ  ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಸಂಚಲನ ಮೂಡಿಸಿತ್ತು. ಕೊಡಗಿನ ಬೆಡಗಿಯ ಬಳಿಕ, ಬಿ ಟೌನ್ ನಟಿ ಕಾಜೋಲ್ ಅವರ ಡೀಪ್ ಫೇಕ್ ವಿಡಿಯೋವನ್ನು ವೈರಲ್ ಮಾಡಲಾಗಿತ್ತು.

ಯುವತ್ತಿಯೊಬ್ಬರು ಬಟ್ಟೆ ಬದಲಿಸುತ್ತಿರುವ ವಿಡಿಯೋವೊಂದಕ್ಕೆ ಡೀಪ್ ಫೇಕ್ ತಂತ್ರಜ್ಞಾನದ ಮೂಲಕ   ಕಾಜೋಲ್ ಅವರ ಮುಖವನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿತ್ತು.

ಅಸಲಿಗೆ ಈ ವಿಡಿಯೋವನ್ನು ಜೂನ್ 5 ರಂದು ಟಿಕ್ ಟಾಕ್ ನಲ್ಲಿ ಸೋಶಿಯಲ್ ಮೀಡಿಯಾ ಸ್ಟಾರ್ ಒಬ್ಬರು, ಗೆಟ್ ರೆಡಿ ವಿತ್ ಮಿ ಟ್ರೆಂಡ್ ಅಡಿಯಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ವಿಡಿಯೋದಲ್ಲಿರುವ ಯುವತಿಯ ಮುಖಕ್ಕೆ ನಟಿ ಕಾಜೋಲ್ ಅವರ ಮುಖವನ್ನು ಜೋಡಿಸಲಾಗಿದೆ ಎಂದು ಪ್ಯಾಕ್ಟ್ ಚೆಕ್ ಮಾಡುವ ಬೂಮ್ ವರದಿ ಮಾಡಿತ್ತು.

lokesh

Share
Published by
lokesh

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago