ವಿಜ್ಞಾನ ತಂತ್ರಜ್ಞಾನ

ಇಸ್ರೋದ 36 ಉಪಗ್ರಹಗಳನ್ನು ಹೊತ್ತ ಅತ್ಯಂತ ಭಾರದ ರಾಕೆಟ್ ಕಕ್ಷೆಯತ್ತ

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾನುವಾರ ಮಧ್ಯರಾತ್ರಿ 12.07 ಕ್ಕೆ ತನ್ನ ಅತ್ಯಂತ ಭಾರವಾದ ರಾಕೆಟ್ ಬಳಸಿ 36 ಉಪಗ್ರಹಗಳನ್ನು ಉಡಾವಣೆ ಮಾಡಿದೆ.

LVM3 ರಾಕೆಟ್ ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಉಡಾವಣಾ ಕೇಂದ್ರದಿಂದ ಹಾರಾಟ ನಡೆಸಲಾಗಿದೆ.ಇಸ್ರೋ ಅತ್ಯಂತ ಭಾರವಾದ ರಾಕೆಟ್ LVM3 ಅನ್ನು ವಾಣಿಜ್ಯದ ಉದ್ದೇಶಕ್ಕೆ ಉಡಾವಣೆ ಮಾಡಿದ್ದು, ಇದರಲ್ಲಿ ಸಾಗಿಸಲಾದ ಉಪಗ್ರಹಗಳು ಲಂಡನ್ ಮೂಲದ ಸಂವಹನ ಸಂಸ್ಥೆ ಒನ್‌ವೆಬ್ ಗೆ ಸೇರಿವೆ. ಇದರಲ್ಲಿ ಭಾರತದ ಭಾರ್ತಿ ಎಂಟರ್‌ಪ್ರೈಸಸ್ ಪ್ರಮುಖ ಹೂಡಿಕೆದಾರರಾಗಿದ್ದಾರೆ.

ಒಟ್ಟು 5,896 ಕೆಜಿಯ 36 ಉಪಗ್ರಹಗಳನ್ನು ರಾಕೆಟ್ ಹೊತ್ತೊಯ್ದಿದೆ. LVM3 ರಾಕೆಟ್ 8 ಸಾವಿರ ಕೆಜಿ ವರೆಗಿನ ಉಪಗ್ರಹಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಇದು ವಾಣಿಜ್ಯ ಉದ್ದೇಶದಿಂದ ಇಸ್ರೋ ಉಡಾಯಿಸಿದ ಮೊದಲ ರಾಕೆಟ್ ಆಗಿದೆ. ಒನ್‌ವೆಬ್‌ನ ಇನ್ನೂ 36 ಉಪಗ್ರಹಗಳನ್ನು 2023ರಲ್ಲಿ ಎಲ್‌ವಿಎಂ ರಾಕೆಟ್‌ನಿಂದ ಉಡಾಯಿಸಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ, ವಿಜ್ಞಾನಿ ಸೋಮನಾಥ್ ತಿಳಿಸಿದ್ದಾರೆ.

andolanait

Share
Published by
andolanait

Recent Posts

ಬೆಳೆಗೆ ನೀರು ಹಾಯಿಸುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ : ರೈತ ಗಂಭೀರ

ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…

27 mins ago

ಸ್ವಂತೂ ಸೂರು ಇಲ್ಲ, ವೃದ್ಯಾಪ್ಯ ವೇತನವೂ ಇಲ್ಲದ ವೃದ್ಧೆಯ ದಾರುಣ ಬದುಕು!

ಹನೂರು : ನೆಮ್ಮದಿಯಾಗಿ ವಾಸಿಸಲು ಸ್ವಂತ ಸೂರಿಲ್ಲ, ಜೀವನೋಪಯಕ್ಕಾಗಿ ವೃದ್ಯಾಪ್ಯ ವೇತನವಿಲ್ಲ. ವಿಳಾಸಕ್ಕಾಗಿ ಆಧಾರ್ ಕಾರ್ಡ್ ಇಲ್ಲ. ತುತ್ತು ಅನ್ನಕ್ಕಾಗಿ…

38 mins ago

ನಮ್ಮ ಮೆಟ್ರೋ ಪ್ರಯಾಣಿಕರಿಗೆ QR ಕೋಡ್‌ ಆಧಾರಿತ ಅನ್‌ಲಿಮಿಟೆಡ್‌ ಪಾಸ್‌: ನಾಳೆಯಿಂದಲೇ ಜಾರಿ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್‌ ಕ್ಯೂಆರ್‌ ಕೋಡ್‌ ಪಾಸ್‌ ಸೇವೆ…

3 hours ago

ಮುಡಾ ಮಾಜಿ ಅಧ್ಯಕ್ಷ ರಾಜೀವ್‌ ವಿರುದ್ಧ ತನಿಖೆಗೆ ಕಾನೂನು ಇಲಾಖೆ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ…

3 hours ago

ಜಲಜೀವನ್‌ ಮಿಷನ್‌ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ

ಮಂಡ್ಯ: ಜಲಜೀವನ್‌ ಮಿಷನ್‌ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ…

3 hours ago

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ: ಮಕ್ಕಳ ಮನಸ್ಸು ಗೆದ್ದ “ಸೂರ್ಯ–ಚಂದ್ರ” ಮಕ್ಕಳ ನಾಟಕ

ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…

3 hours ago