ವಿಜ್ಞಾನ ತಂತ್ರಜ್ಞಾನ

ಇಸ್ರೋದ 36 ಉಪಗ್ರಹಗಳನ್ನು ಹೊತ್ತ ಅತ್ಯಂತ ಭಾರದ ರಾಕೆಟ್ ಕಕ್ಷೆಯತ್ತ

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾನುವಾರ ಮಧ್ಯರಾತ್ರಿ 12.07 ಕ್ಕೆ ತನ್ನ ಅತ್ಯಂತ ಭಾರವಾದ ರಾಕೆಟ್ ಬಳಸಿ 36 ಉಪಗ್ರಹಗಳನ್ನು ಉಡಾವಣೆ ಮಾಡಿದೆ.

LVM3 ರಾಕೆಟ್ ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಉಡಾವಣಾ ಕೇಂದ್ರದಿಂದ ಹಾರಾಟ ನಡೆಸಲಾಗಿದೆ.ಇಸ್ರೋ ಅತ್ಯಂತ ಭಾರವಾದ ರಾಕೆಟ್ LVM3 ಅನ್ನು ವಾಣಿಜ್ಯದ ಉದ್ದೇಶಕ್ಕೆ ಉಡಾವಣೆ ಮಾಡಿದ್ದು, ಇದರಲ್ಲಿ ಸಾಗಿಸಲಾದ ಉಪಗ್ರಹಗಳು ಲಂಡನ್ ಮೂಲದ ಸಂವಹನ ಸಂಸ್ಥೆ ಒನ್‌ವೆಬ್ ಗೆ ಸೇರಿವೆ. ಇದರಲ್ಲಿ ಭಾರತದ ಭಾರ್ತಿ ಎಂಟರ್‌ಪ್ರೈಸಸ್ ಪ್ರಮುಖ ಹೂಡಿಕೆದಾರರಾಗಿದ್ದಾರೆ.

ಒಟ್ಟು 5,896 ಕೆಜಿಯ 36 ಉಪಗ್ರಹಗಳನ್ನು ರಾಕೆಟ್ ಹೊತ್ತೊಯ್ದಿದೆ. LVM3 ರಾಕೆಟ್ 8 ಸಾವಿರ ಕೆಜಿ ವರೆಗಿನ ಉಪಗ್ರಹಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಇದು ವಾಣಿಜ್ಯ ಉದ್ದೇಶದಿಂದ ಇಸ್ರೋ ಉಡಾಯಿಸಿದ ಮೊದಲ ರಾಕೆಟ್ ಆಗಿದೆ. ಒನ್‌ವೆಬ್‌ನ ಇನ್ನೂ 36 ಉಪಗ್ರಹಗಳನ್ನು 2023ರಲ್ಲಿ ಎಲ್‌ವಿಎಂ ರಾಕೆಟ್‌ನಿಂದ ಉಡಾಯಿಸಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ, ವಿಜ್ಞಾನಿ ಸೋಮನಾಥ್ ತಿಳಿಸಿದ್ದಾರೆ.

andolanait

Share
Published by
andolanait

Recent Posts

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

39 mins ago

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…

45 mins ago

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…

1 hour ago

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

2 hours ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

2 hours ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

4 hours ago