ವಿಜ್ಞಾನ ತಂತ್ರಜ್ಞಾನ

ಇಸ್ರೋದ 36 ಉಪಗ್ರಹಗಳನ್ನು ಹೊತ್ತ ಅತ್ಯಂತ ಭಾರದ ರಾಕೆಟ್ ಕಕ್ಷೆಯತ್ತ

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾನುವಾರ ಮಧ್ಯರಾತ್ರಿ 12.07 ಕ್ಕೆ ತನ್ನ ಅತ್ಯಂತ ಭಾರವಾದ ರಾಕೆಟ್ ಬಳಸಿ 36 ಉಪಗ್ರಹಗಳನ್ನು ಉಡಾವಣೆ ಮಾಡಿದೆ.

LVM3 ರಾಕೆಟ್ ಅನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಉಡಾವಣಾ ಕೇಂದ್ರದಿಂದ ಹಾರಾಟ ನಡೆಸಲಾಗಿದೆ.ಇಸ್ರೋ ಅತ್ಯಂತ ಭಾರವಾದ ರಾಕೆಟ್ LVM3 ಅನ್ನು ವಾಣಿಜ್ಯದ ಉದ್ದೇಶಕ್ಕೆ ಉಡಾವಣೆ ಮಾಡಿದ್ದು, ಇದರಲ್ಲಿ ಸಾಗಿಸಲಾದ ಉಪಗ್ರಹಗಳು ಲಂಡನ್ ಮೂಲದ ಸಂವಹನ ಸಂಸ್ಥೆ ಒನ್‌ವೆಬ್ ಗೆ ಸೇರಿವೆ. ಇದರಲ್ಲಿ ಭಾರತದ ಭಾರ್ತಿ ಎಂಟರ್‌ಪ್ರೈಸಸ್ ಪ್ರಮುಖ ಹೂಡಿಕೆದಾರರಾಗಿದ್ದಾರೆ.

ಒಟ್ಟು 5,896 ಕೆಜಿಯ 36 ಉಪಗ್ರಹಗಳನ್ನು ರಾಕೆಟ್ ಹೊತ್ತೊಯ್ದಿದೆ. LVM3 ರಾಕೆಟ್ 8 ಸಾವಿರ ಕೆಜಿ ವರೆಗಿನ ಉಪಗ್ರಹಗಳನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ಇದು ವಾಣಿಜ್ಯ ಉದ್ದೇಶದಿಂದ ಇಸ್ರೋ ಉಡಾಯಿಸಿದ ಮೊದಲ ರಾಕೆಟ್ ಆಗಿದೆ. ಒನ್‌ವೆಬ್‌ನ ಇನ್ನೂ 36 ಉಪಗ್ರಹಗಳನ್ನು 2023ರಲ್ಲಿ ಎಲ್‌ವಿಎಂ ರಾಕೆಟ್‌ನಿಂದ ಉಡಾಯಿಸಲಾಗುತ್ತದೆ ಎಂದು ಇಸ್ರೋ ಅಧ್ಯಕ್ಷ, ವಿಜ್ಞಾನಿ ಸೋಮನಾಥ್ ತಿಳಿಸಿದ್ದಾರೆ.

andolanait

Share
Published by
andolanait

Recent Posts

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ

ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…

4 hours ago

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್‌ ಕಣಿವೆಯಲ್ಲಿ…

4 hours ago

ಶರದ್‌ ಪವಾರ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್‌ ಆಸ್ಪತ್ರೆಗೆ ದಾಖಲಾಗಿದ್ದ ಶರದ್‌ ಪವಾರ್‌ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ. ಶರದ್‌ ಪವಾರ್‌…

4 hours ago

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟ ವ್ಯಕ್ತಿ

ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…

7 hours ago

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ

ಹಾಸನ: ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

7 hours ago