ವಿಜ್ಞಾನ ತಂತ್ರಜ್ಞಾನ

ಮಂಗಳನಂಗಳಕ್ಕೆ ಮತ್ತೊಂದು ಉಪಗ್ರಹ ಕಳಿಸಲು ಇಸ್ರೋ ಸಿದ್ಧತೆ

ನವದೆಹಲಿ : ಚಂದ್ರ ಮತ್ತು ಮಂಗಳ ಗ್ರಹಕ್ಕೆ ತೆರಳಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಶುಕ್ರ ಗ್ರಹದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಜಪಾನ್ ದೇಶದ ಸಹಯೋಗದೊಂದಿಗೆ ಚಂದ್ರನ ಕಪ್ಪು ಭಾಗವನ್ನು ಅನ್ವೇಷಿಸಲು ಇಸ್ರೋ ಯೋಚಿಸಿದೆ. ಆಕಾಶ್ ತತ್ವ ಸಮ್ಮೇಳನದಲ್ಲಿ ಇಸ್ರೋದ ಭವಿಷ್ಯದ ಕಾರ್ಯಗಳ ಕುರಿತು ಪ್ರಸ್ತುತಿ ಮಾಡಿದ ಅಹಮದಾಬಾದ್ ಮೂಲದ ಭೌತಿಕ ಸಂಶೋಧನಾ ಪ್ರಯೋಗಾಲಯದ ನಿರ್ದೇಶಕ ಅನಿಲ್ ಭಾರದ್ವಾಜ್, ಇಸ್ರೋ ಮಂಗಳ ಗ್ರಹಕ್ಕೆ ಪುನಃ ಉಪಗ್ರಹವನ್ನು ಕಳುಹಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಚಂದ್ರನಲ್ಲಿರುವ ಶಾಶ್ವತ ನೆರಳಿನಂತಹ ಪ್ರದೇಶವನ್ನು ಅನ್ವೇಷಣೆ ಮಾಡಲು ಲೂನಾರ್ ರೋವರ್ ಅನ್ನು ಕಳುಹಿಸಲು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅನಿಲ್ ಭಾರದ್ವಾಜ್ ಹೇಳಿದ್ದಾರೆ. ಸದ್ಯದ ಯೋಜನೆಗಳ ಪ್ರಕಾರ, ಇಸ್ರೋ ನಿರ್ಮಿಸಿದ ಚಂದ್ರನ ಲ್ಯಾಂಡರ್ ಮತ್ತು ರೋವರ್ ಅನ್ನು ಜಪಾನಿನ ರಾಕೆಟ್ ಮೂಲಕ ಚಂದ್ರನ ದಕ್ಷಿಣ ಧ್ರುವದ ಬಳಿ ಯೋಜಿತ ಲ್ಯಾಂಡಿಂಗ್ ಮೂಲಕ ಕಕ್ಷೆಗೆ ಸೇರಿಸಲಾಗುತ್ತದೆ.

ಆ ರೋವರ್ ನಂತರ ಸೂರ್ಯನ ಬೆಳಕು ಬೀಳದ ಚಂದ್ರನ ಶಾಶ್ವತ ನೆರಳಿನಂತಹ ಪ್ರದೇಶಕ್ಕೆ ಪ್ರಯಾಣಿಸುತ್ತದೆ. ಆದಿತ್ಯ L-1 ಒಂದು ವಿಶಿಷ್ಟವಾದ ಮಿಷನ್ ಆಗಿದ್ದು, ಇದರಲ್ಲಿ ಪೇಲೋಡ್ ಅನ್ನು ಹೊತ್ತ 400-ಕೆಜಿ ವರ್ಗದ ಉಪಗ್ರಹವನ್ನು ಸೂರ್ಯನ ಸುತ್ತ ಕಕ್ಷೆಯಲ್ಲಿ ಇರಿಸಲಾಗುವುದು. ಮುಂದಿನ ವರ್ಷದ ಆರಂಭದಲ್ಲಿ ಆದಿತ್ಯ ಎಲ್-1 ಮತ್ತು ಚಂದ್ರಯಾನ-3 ಮಿಷನ್‌ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅನಿಲ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿದೆ. 2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ. ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.

andolana

Share
Published by
andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago