ವಿಜ್ಞಾನ ತಂತ್ರಜ್ಞಾನ

ಮಂಗಳನಂಗಳಕ್ಕೆ ಮತ್ತೊಂದು ಉಪಗ್ರಹ ಕಳಿಸಲು ಇಸ್ರೋ ಸಿದ್ಧತೆ

ನವದೆಹಲಿ : ಚಂದ್ರ ಮತ್ತು ಮಂಗಳ ಗ್ರಹಕ್ಕೆ ತೆರಳಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಶುಕ್ರ ಗ್ರಹದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಜಪಾನ್ ದೇಶದ ಸಹಯೋಗದೊಂದಿಗೆ ಚಂದ್ರನ ಕಪ್ಪು ಭಾಗವನ್ನು ಅನ್ವೇಷಿಸಲು ಇಸ್ರೋ ಯೋಚಿಸಿದೆ. ಆಕಾಶ್ ತತ್ವ ಸಮ್ಮೇಳನದಲ್ಲಿ ಇಸ್ರೋದ ಭವಿಷ್ಯದ ಕಾರ್ಯಗಳ ಕುರಿತು ಪ್ರಸ್ತುತಿ ಮಾಡಿದ ಅಹಮದಾಬಾದ್ ಮೂಲದ ಭೌತಿಕ ಸಂಶೋಧನಾ ಪ್ರಯೋಗಾಲಯದ ನಿರ್ದೇಶಕ ಅನಿಲ್ ಭಾರದ್ವಾಜ್, ಇಸ್ರೋ ಮಂಗಳ ಗ್ರಹಕ್ಕೆ ಪುನಃ ಉಪಗ್ರಹವನ್ನು ಕಳುಹಿಸಲು ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ.

ಚಂದ್ರನಲ್ಲಿರುವ ಶಾಶ್ವತ ನೆರಳಿನಂತಹ ಪ್ರದೇಶವನ್ನು ಅನ್ವೇಷಣೆ ಮಾಡಲು ಲೂನಾರ್ ರೋವರ್ ಅನ್ನು ಕಳುಹಿಸಲು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಷನ್ ಏಜೆನ್ಸಿಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅನಿಲ್ ಭಾರದ್ವಾಜ್ ಹೇಳಿದ್ದಾರೆ. ಸದ್ಯದ ಯೋಜನೆಗಳ ಪ್ರಕಾರ, ಇಸ್ರೋ ನಿರ್ಮಿಸಿದ ಚಂದ್ರನ ಲ್ಯಾಂಡರ್ ಮತ್ತು ರೋವರ್ ಅನ್ನು ಜಪಾನಿನ ರಾಕೆಟ್ ಮೂಲಕ ಚಂದ್ರನ ದಕ್ಷಿಣ ಧ್ರುವದ ಬಳಿ ಯೋಜಿತ ಲ್ಯಾಂಡಿಂಗ್ ಮೂಲಕ ಕಕ್ಷೆಗೆ ಸೇರಿಸಲಾಗುತ್ತದೆ.

ಆ ರೋವರ್ ನಂತರ ಸೂರ್ಯನ ಬೆಳಕು ಬೀಳದ ಚಂದ್ರನ ಶಾಶ್ವತ ನೆರಳಿನಂತಹ ಪ್ರದೇಶಕ್ಕೆ ಪ್ರಯಾಣಿಸುತ್ತದೆ. ಆದಿತ್ಯ L-1 ಒಂದು ವಿಶಿಷ್ಟವಾದ ಮಿಷನ್ ಆಗಿದ್ದು, ಇದರಲ್ಲಿ ಪೇಲೋಡ್ ಅನ್ನು ಹೊತ್ತ 400-ಕೆಜಿ ವರ್ಗದ ಉಪಗ್ರಹವನ್ನು ಸೂರ್ಯನ ಸುತ್ತ ಕಕ್ಷೆಯಲ್ಲಿ ಇರಿಸಲಾಗುವುದು. ಮುಂದಿನ ವರ್ಷದ ಆರಂಭದಲ್ಲಿ ಆದಿತ್ಯ ಎಲ್-1 ಮತ್ತು ಚಂದ್ರಯಾನ-3 ಮಿಷನ್‌ಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅನಿಲ್ ಭಾರದ್ವಾಜ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ 2023ರ ಜೂನ್‌ನಲ್ಲಿ ಚಂದ್ರಯಾನ-3 ಉಡಾವಣೆ ಮಾಡಲು ಯೋಜನೆ ರೂಪಿಸಿದೆ. ಅಬಾರ್ಟ್ ಮಿಷನ್ ಯಶಸ್ವಿಯಾಗಿ ನಡೆಸಿದ ಬಳಿಕ 2024 ರ ಕೊನೆಯ ವೇಳೆಗೆ ಭಾರತೀಯ ಗಗನಯಾತ್ರಿಗಳನ್ನು ಕಕ್ಷೆಗೆ ಹಾರಿಸಲು ಇಸ್ರೋ ಯೋಜಿಸಿದೆ. 2019ರಲ್ಲಿ ಕೈಗೊಳ್ಳಲಾಗಿದ್ದ ಚಂದ್ರಯಾನ -2 ಕಾರ್ಯಾಚರಣೆಯಲ್ಲಿ ರೋವರ್ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಕೊನೇ ಕ್ಷಣದಲ್ಲಿ ವಿಫಲವಾಗಿತ್ತು. ಚಂದ್ರಯಾನ 3 ಇದೀಗ ಸಜ್ಜಾಗಿದೆ. ಇದು ಭವಿಷ್ಯದ ಅಂತರ-ಗ್ರಹ ಪರಿಶೋಧನೆಗಳಿಗೆ ನಿರ್ಣಾಯಕವಾಗಿದೆ. ಮುಂದಿನ ವರ್ಷದ ಆರಂಭದಲ್ಲಿ ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನ ಯಾನಕ್ಕಾಗಿ ಅಬಾರ್ಟ್ ಮಿಷನ್ ನ ಮೊದಲ ಪರೀಕ್ಷಾರ್ಥ ಹಾರಾಟ ಮಾಡಲಾಗುತ್ತಿದೆ.

andolana

Share
Published by
andolana

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago