ವಿಜ್ಞಾನ ತಂತ್ರಜ್ಞಾನ

ಇಸ್ರೊದಿಂದ 8 ನ್ಯಾನೊ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಪಿಎಸ್‌ಎಲ್‌ವಿ-ಸಿ ೫೪ ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್‌ಸ್ಯಾಟ್-೩ ಎಂದೂ ಕರೆಯಲ್ಪಡುವ ಇಒಎಸ್-೦೬ ಮತ್ತು ೮ ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.
ಇಸ್ರೋ ಕೈಗೊಂಡ ಈ ವರ್ಷದ ಕೊನೆಯ ಉಡಾವಣೆ ಇದಾಗಿದೆ. ಓಷನ್ ಸ್ಯಾಟ್-೩ ಭೂಮಿಯ ವೀಕ್ಷಣಾ ಉಪಗ್ರಹ (ಇಒಎಸ್-೦೬) ಅಥವಾ ಓಷನ್‌ಸ್ಯಾಟ್‌ನ್ನು ಅದರ ಪ್ರಾಥಮಿಕ ಪೇಲೋಡ್ ಆಗಿ ಒಯ್ಯತ್ತದೆ. ಎಂಟು ಸಹ-ಪ್ರಯಾಣಿಕ ಉಪಗ್ರಹಗಳನ್ನು ಎರಡು ಗಂಟೆಗಳ ಕಾಲಾವಧಿಯಲ್ಲಿ ಸೂರ್ಯನ ಸಿಂಕ್ರೊನಸ್ ಕಕ್ಷೆಗಳಲ್ಲಿ ಇರಿಸಲಿದೆ.
ಭಾರತೀಯ ಕಾಲಮಾನ ಶನಿವಾರ ಬೆಳಿಗ್ಗೆ ೧೧.೫೬ಕ್ಕೆ ಉಡಾವಣೆಯಾಗಿದ್ದು, ಎರಡು ಗಂಟೆಗಳಲ್ಲಿ ಉಪಗ್ರಹಗಳ ಸಂಪೂರ್ಣ ಬೇರ್ಪಡಿಕೆ ಸಂಭವಿಸಿದೆ. ಭೂಮಿಯ ವೀಕ್ಷಣಾ ಉಪಗ್ರಹ-೬ ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ವರ್ಧಿತ ಪೇಲೋಡ್ ವಿಶೇಷಣಗಳು ಮತ್ತು ಅಪ್ಲಿಕೇಶನ್ ಪ್ರದೇಶಗಳೊಂದಿಗೆ ಈಷನ್ ಸ್ಯಾಟ್-೦೨ ಬಾಹ್ಯಾಕಾಶ ನೌಕೆಯ ನಿರಂತರತೆಯ ಸೇವೆಗಳನ್ನು ಇದು ಒದಗಿಸುತ್ತದೆ.
ಇಸ್ರೋ ಶನಿವಾರ ಭೂ ವೀಕ್ಷಣಾ ಉಪಗ್ರಹ, ಓಷನ್‌ಸ್ಯಾಟ್ -೩ ಮತ್ತು ಇತರ ಎಂಟು ಗ್ರಾಹಕ ಉಪಗ್ರಹಗಳನ್ನು ಎರಡು ವಿಭಿನ್ನ ಕಕ್ಷೆಗಳಲ್ಲಿ ಒಂದೇ ಕಾರ್ಯಾಚರಣೆಯಲ್ಲಿ ಯಶಸಿವಯಾಗಿ ಉಡಾವಣೆ ಮಾಡಿದೆ.
ಉಪಗ್ರಹಗಳನ್ನು ವಿವಿಧ ಎತ್ತರಗಳಲ್ಲಿ ವಿವಿಧ ಕಕ್ಷೆಗಳಲ್ಲಿ ಇರಿಸಲು ವಿಜ್ಞಾನಿಗಳು ಹಲವಾರು ಕುಶಲತೆಯನ್ನು ಈ ಕಾರ್ಯಾಚರಣೆಯಲ್ಲಿ ಕೈಗೊಂಡಿದ್ದಾರೆ. ಇಸ್ರೋ ಕೈಗೊಂಡಿರುವ ಸುದೀರ್ಘ ಕಾರ್ಯಾರಣೆಗಳಲ್ಲಿ ಇದು ಕೂಡ ಒಂದಾಗಿದೆ. ಒಟ್ಟು ಕಾರ್ಯಾಚರಣೆಯ ಅವಧಿಯು ಸುಮಾರು ೨ ಗಂಟೆಗಳು.

ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿರುವ ಪ್ರಾಥಮಿಕ ಉಪಗ್ರಹ ಇಒಎಸ್-೦೬ ನ್ನು ೭೪೨ ಕಿಮೀ ಎತ್ತರದಲ್ಲಿ ಲಿಫ್ಟ್-ಆಫ್‌ನಿಂದ ೧೭ ನಿಮಿಷಗಳ ನಂತರ ಕಕ್ಷೆ-೧ ರಲ್ಲಿ ಇರಿಸಲಾಯಿತು. ತರುವಾಯ, ಪಿಎಸ್‌ಎಲ್‌ವಿ-ಸಿ೫೪ ವಾಹನದ ಪ್ರೊಪಲ್ಷನ್ ಬೇರಿಂಗ್‌ನಲ್ಲಿ ಎರಡು ಆರ್ಬಿಟ್ ಚೇಂಜ್ ಥ್ರಸ್ಟರ್‌ಗಳನ್ನು ಬಳಸಿಕೊಂಡು ಕಕ್ಷೆಯ ಬದಲಾವಣೆಯನ್ನು ಮಾಡಲಾಯಿತು.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

9 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago