ವಿಜ್ಞಾನ ತಂತ್ರಜ್ಞಾನ

ಇಸ್ರೊದಿಂದ 8 ನ್ಯಾನೊ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಪಿಎಸ್‌ಎಲ್‌ವಿ-ಸಿ ೫೪ ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್‌ಸ್ಯಾಟ್-೩ ಎಂದೂ ಕರೆಯಲ್ಪಡುವ ಇಒಎಸ್-೦೬ ಮತ್ತು ೮ ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.
ಇಸ್ರೋ ಕೈಗೊಂಡ ಈ ವರ್ಷದ ಕೊನೆಯ ಉಡಾವಣೆ ಇದಾಗಿದೆ. ಓಷನ್ ಸ್ಯಾಟ್-೩ ಭೂಮಿಯ ವೀಕ್ಷಣಾ ಉಪಗ್ರಹ (ಇಒಎಸ್-೦೬) ಅಥವಾ ಓಷನ್‌ಸ್ಯಾಟ್‌ನ್ನು ಅದರ ಪ್ರಾಥಮಿಕ ಪೇಲೋಡ್ ಆಗಿ ಒಯ್ಯತ್ತದೆ. ಎಂಟು ಸಹ-ಪ್ರಯಾಣಿಕ ಉಪಗ್ರಹಗಳನ್ನು ಎರಡು ಗಂಟೆಗಳ ಕಾಲಾವಧಿಯಲ್ಲಿ ಸೂರ್ಯನ ಸಿಂಕ್ರೊನಸ್ ಕಕ್ಷೆಗಳಲ್ಲಿ ಇರಿಸಲಿದೆ.
ಭಾರತೀಯ ಕಾಲಮಾನ ಶನಿವಾರ ಬೆಳಿಗ್ಗೆ ೧೧.೫೬ಕ್ಕೆ ಉಡಾವಣೆಯಾಗಿದ್ದು, ಎರಡು ಗಂಟೆಗಳಲ್ಲಿ ಉಪಗ್ರಹಗಳ ಸಂಪೂರ್ಣ ಬೇರ್ಪಡಿಕೆ ಸಂಭವಿಸಿದೆ. ಭೂಮಿಯ ವೀಕ್ಷಣಾ ಉಪಗ್ರಹ-೬ ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ವರ್ಧಿತ ಪೇಲೋಡ್ ವಿಶೇಷಣಗಳು ಮತ್ತು ಅಪ್ಲಿಕೇಶನ್ ಪ್ರದೇಶಗಳೊಂದಿಗೆ ಈಷನ್ ಸ್ಯಾಟ್-೦೨ ಬಾಹ್ಯಾಕಾಶ ನೌಕೆಯ ನಿರಂತರತೆಯ ಸೇವೆಗಳನ್ನು ಇದು ಒದಗಿಸುತ್ತದೆ.
ಇಸ್ರೋ ಶನಿವಾರ ಭೂ ವೀಕ್ಷಣಾ ಉಪಗ್ರಹ, ಓಷನ್‌ಸ್ಯಾಟ್ -೩ ಮತ್ತು ಇತರ ಎಂಟು ಗ್ರಾಹಕ ಉಪಗ್ರಹಗಳನ್ನು ಎರಡು ವಿಭಿನ್ನ ಕಕ್ಷೆಗಳಲ್ಲಿ ಒಂದೇ ಕಾರ್ಯಾಚರಣೆಯಲ್ಲಿ ಯಶಸಿವಯಾಗಿ ಉಡಾವಣೆ ಮಾಡಿದೆ.
ಉಪಗ್ರಹಗಳನ್ನು ವಿವಿಧ ಎತ್ತರಗಳಲ್ಲಿ ವಿವಿಧ ಕಕ್ಷೆಗಳಲ್ಲಿ ಇರಿಸಲು ವಿಜ್ಞಾನಿಗಳು ಹಲವಾರು ಕುಶಲತೆಯನ್ನು ಈ ಕಾರ್ಯಾಚರಣೆಯಲ್ಲಿ ಕೈಗೊಂಡಿದ್ದಾರೆ. ಇಸ್ರೋ ಕೈಗೊಂಡಿರುವ ಸುದೀರ್ಘ ಕಾರ್ಯಾರಣೆಗಳಲ್ಲಿ ಇದು ಕೂಡ ಒಂದಾಗಿದೆ. ಒಟ್ಟು ಕಾರ್ಯಾಚರಣೆಯ ಅವಧಿಯು ಸುಮಾರು ೨ ಗಂಟೆಗಳು.

ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿರುವ ಪ್ರಾಥಮಿಕ ಉಪಗ್ರಹ ಇಒಎಸ್-೦೬ ನ್ನು ೭೪೨ ಕಿಮೀ ಎತ್ತರದಲ್ಲಿ ಲಿಫ್ಟ್-ಆಫ್‌ನಿಂದ ೧೭ ನಿಮಿಷಗಳ ನಂತರ ಕಕ್ಷೆ-೧ ರಲ್ಲಿ ಇರಿಸಲಾಯಿತು. ತರುವಾಯ, ಪಿಎಸ್‌ಎಲ್‌ವಿ-ಸಿ೫೪ ವಾಹನದ ಪ್ರೊಪಲ್ಷನ್ ಬೇರಿಂಗ್‌ನಲ್ಲಿ ಎರಡು ಆರ್ಬಿಟ್ ಚೇಂಜ್ ಥ್ರಸ್ಟರ್‌ಗಳನ್ನು ಬಳಸಿಕೊಂಡು ಕಕ್ಷೆಯ ಬದಲಾವಣೆಯನ್ನು ಮಾಡಲಾಯಿತು.

andolanait

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

30 seconds ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

20 mins ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

27 mins ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

30 mins ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

37 mins ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

44 mins ago