ವಿಜ್ಞಾನ ತಂತ್ರಜ್ಞಾನ

ಇಸ್ರೊದಿಂದ 8 ನ್ಯಾನೊ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಪಿಎಸ್‌ಎಲ್‌ವಿ-ಸಿ ೫೪ ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್‌ಸ್ಯಾಟ್-೩ ಎಂದೂ ಕರೆಯಲ್ಪಡುವ ಇಒಎಸ್-೦೬ ಮತ್ತು ೮ ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.
ಇಸ್ರೋ ಕೈಗೊಂಡ ಈ ವರ್ಷದ ಕೊನೆಯ ಉಡಾವಣೆ ಇದಾಗಿದೆ. ಓಷನ್ ಸ್ಯಾಟ್-೩ ಭೂಮಿಯ ವೀಕ್ಷಣಾ ಉಪಗ್ರಹ (ಇಒಎಸ್-೦೬) ಅಥವಾ ಓಷನ್‌ಸ್ಯಾಟ್‌ನ್ನು ಅದರ ಪ್ರಾಥಮಿಕ ಪೇಲೋಡ್ ಆಗಿ ಒಯ್ಯತ್ತದೆ. ಎಂಟು ಸಹ-ಪ್ರಯಾಣಿಕ ಉಪಗ್ರಹಗಳನ್ನು ಎರಡು ಗಂಟೆಗಳ ಕಾಲಾವಧಿಯಲ್ಲಿ ಸೂರ್ಯನ ಸಿಂಕ್ರೊನಸ್ ಕಕ್ಷೆಗಳಲ್ಲಿ ಇರಿಸಲಿದೆ.
ಭಾರತೀಯ ಕಾಲಮಾನ ಶನಿವಾರ ಬೆಳಿಗ್ಗೆ ೧೧.೫೬ಕ್ಕೆ ಉಡಾವಣೆಯಾಗಿದ್ದು, ಎರಡು ಗಂಟೆಗಳಲ್ಲಿ ಉಪಗ್ರಹಗಳ ಸಂಪೂರ್ಣ ಬೇರ್ಪಡಿಕೆ ಸಂಭವಿಸಿದೆ. ಭೂಮಿಯ ವೀಕ್ಷಣಾ ಉಪಗ್ರಹ-೬ ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ವರ್ಧಿತ ಪೇಲೋಡ್ ವಿಶೇಷಣಗಳು ಮತ್ತು ಅಪ್ಲಿಕೇಶನ್ ಪ್ರದೇಶಗಳೊಂದಿಗೆ ಈಷನ್ ಸ್ಯಾಟ್-೦೨ ಬಾಹ್ಯಾಕಾಶ ನೌಕೆಯ ನಿರಂತರತೆಯ ಸೇವೆಗಳನ್ನು ಇದು ಒದಗಿಸುತ್ತದೆ.
ಇಸ್ರೋ ಶನಿವಾರ ಭೂ ವೀಕ್ಷಣಾ ಉಪಗ್ರಹ, ಓಷನ್‌ಸ್ಯಾಟ್ -೩ ಮತ್ತು ಇತರ ಎಂಟು ಗ್ರಾಹಕ ಉಪಗ್ರಹಗಳನ್ನು ಎರಡು ವಿಭಿನ್ನ ಕಕ್ಷೆಗಳಲ್ಲಿ ಒಂದೇ ಕಾರ್ಯಾಚರಣೆಯಲ್ಲಿ ಯಶಸಿವಯಾಗಿ ಉಡಾವಣೆ ಮಾಡಿದೆ.
ಉಪಗ್ರಹಗಳನ್ನು ವಿವಿಧ ಎತ್ತರಗಳಲ್ಲಿ ವಿವಿಧ ಕಕ್ಷೆಗಳಲ್ಲಿ ಇರಿಸಲು ವಿಜ್ಞಾನಿಗಳು ಹಲವಾರು ಕುಶಲತೆಯನ್ನು ಈ ಕಾರ್ಯಾಚರಣೆಯಲ್ಲಿ ಕೈಗೊಂಡಿದ್ದಾರೆ. ಇಸ್ರೋ ಕೈಗೊಂಡಿರುವ ಸುದೀರ್ಘ ಕಾರ್ಯಾರಣೆಗಳಲ್ಲಿ ಇದು ಕೂಡ ಒಂದಾಗಿದೆ. ಒಟ್ಟು ಕಾರ್ಯಾಚರಣೆಯ ಅವಧಿಯು ಸುಮಾರು ೨ ಗಂಟೆಗಳು.

ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿರುವ ಪ್ರಾಥಮಿಕ ಉಪಗ್ರಹ ಇಒಎಸ್-೦೬ ನ್ನು ೭೪೨ ಕಿಮೀ ಎತ್ತರದಲ್ಲಿ ಲಿಫ್ಟ್-ಆಫ್‌ನಿಂದ ೧೭ ನಿಮಿಷಗಳ ನಂತರ ಕಕ್ಷೆ-೧ ರಲ್ಲಿ ಇರಿಸಲಾಯಿತು. ತರುವಾಯ, ಪಿಎಸ್‌ಎಲ್‌ವಿ-ಸಿ೫೪ ವಾಹನದ ಪ್ರೊಪಲ್ಷನ್ ಬೇರಿಂಗ್‌ನಲ್ಲಿ ಎರಡು ಆರ್ಬಿಟ್ ಚೇಂಜ್ ಥ್ರಸ್ಟರ್‌ಗಳನ್ನು ಬಳಸಿಕೊಂಡು ಕಕ್ಷೆಯ ಬದಲಾವಣೆಯನ್ನು ಮಾಡಲಾಯಿತು.

andolanait

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

8 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

21 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

21 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

21 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

21 hours ago