ವಿಜ್ಞಾನ ತಂತ್ರಜ್ಞಾನ

ಇಸ್ರೊದಿಂದ 8 ನ್ಯಾನೊ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ (ಇಸ್ರೋ) ಶನಿವಾರ ಪಿಎಸ್‌ಎಲ್‌ವಿ-ಸಿ ೫೪ ರಾಕೆಟ್ ನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಓಷನ್‌ಸ್ಯಾಟ್-೩ ಎಂದೂ ಕರೆಯಲ್ಪಡುವ ಇಒಎಸ್-೦೬ ಮತ್ತು ೮ ನ್ಯಾನೊ ಉಪಗ್ರಹಗಳನ್ನು ಹೊತ್ತ ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಂಡಿತು.
ಇಸ್ರೋ ಕೈಗೊಂಡ ಈ ವರ್ಷದ ಕೊನೆಯ ಉಡಾವಣೆ ಇದಾಗಿದೆ. ಓಷನ್ ಸ್ಯಾಟ್-೩ ಭೂಮಿಯ ವೀಕ್ಷಣಾ ಉಪಗ್ರಹ (ಇಒಎಸ್-೦೬) ಅಥವಾ ಓಷನ್‌ಸ್ಯಾಟ್‌ನ್ನು ಅದರ ಪ್ರಾಥಮಿಕ ಪೇಲೋಡ್ ಆಗಿ ಒಯ್ಯತ್ತದೆ. ಎಂಟು ಸಹ-ಪ್ರಯಾಣಿಕ ಉಪಗ್ರಹಗಳನ್ನು ಎರಡು ಗಂಟೆಗಳ ಕಾಲಾವಧಿಯಲ್ಲಿ ಸೂರ್ಯನ ಸಿಂಕ್ರೊನಸ್ ಕಕ್ಷೆಗಳಲ್ಲಿ ಇರಿಸಲಿದೆ.
ಭಾರತೀಯ ಕಾಲಮಾನ ಶನಿವಾರ ಬೆಳಿಗ್ಗೆ ೧೧.೫೬ಕ್ಕೆ ಉಡಾವಣೆಯಾಗಿದ್ದು, ಎರಡು ಗಂಟೆಗಳಲ್ಲಿ ಉಪಗ್ರಹಗಳ ಸಂಪೂರ್ಣ ಬೇರ್ಪಡಿಕೆ ಸಂಭವಿಸಿದೆ. ಭೂಮಿಯ ವೀಕ್ಷಣಾ ಉಪಗ್ರಹ-೬ ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿದೆ. ವರ್ಧಿತ ಪೇಲೋಡ್ ವಿಶೇಷಣಗಳು ಮತ್ತು ಅಪ್ಲಿಕೇಶನ್ ಪ್ರದೇಶಗಳೊಂದಿಗೆ ಈಷನ್ ಸ್ಯಾಟ್-೦೨ ಬಾಹ್ಯಾಕಾಶ ನೌಕೆಯ ನಿರಂತರತೆಯ ಸೇವೆಗಳನ್ನು ಇದು ಒದಗಿಸುತ್ತದೆ.
ಇಸ್ರೋ ಶನಿವಾರ ಭೂ ವೀಕ್ಷಣಾ ಉಪಗ್ರಹ, ಓಷನ್‌ಸ್ಯಾಟ್ -೩ ಮತ್ತು ಇತರ ಎಂಟು ಗ್ರಾಹಕ ಉಪಗ್ರಹಗಳನ್ನು ಎರಡು ವಿಭಿನ್ನ ಕಕ್ಷೆಗಳಲ್ಲಿ ಒಂದೇ ಕಾರ್ಯಾಚರಣೆಯಲ್ಲಿ ಯಶಸಿವಯಾಗಿ ಉಡಾವಣೆ ಮಾಡಿದೆ.
ಉಪಗ್ರಹಗಳನ್ನು ವಿವಿಧ ಎತ್ತರಗಳಲ್ಲಿ ವಿವಿಧ ಕಕ್ಷೆಗಳಲ್ಲಿ ಇರಿಸಲು ವಿಜ್ಞಾನಿಗಳು ಹಲವಾರು ಕುಶಲತೆಯನ್ನು ಈ ಕಾರ್ಯಾಚರಣೆಯಲ್ಲಿ ಕೈಗೊಂಡಿದ್ದಾರೆ. ಇಸ್ರೋ ಕೈಗೊಂಡಿರುವ ಸುದೀರ್ಘ ಕಾರ್ಯಾರಣೆಗಳಲ್ಲಿ ಇದು ಕೂಡ ಒಂದಾಗಿದೆ. ಒಟ್ಟು ಕಾರ್ಯಾಚರಣೆಯ ಅವಧಿಯು ಸುಮಾರು ೨ ಗಂಟೆಗಳು.

ಓಷನ್‌ಸ್ಯಾಟ್ ಸರಣಿಯ ಮೂರನೇ ತಲೆಮಾರಿನ ಉಪಗ್ರಹವಾಗಿರುವ ಪ್ರಾಥಮಿಕ ಉಪಗ್ರಹ ಇಒಎಸ್-೦೬ ನ್ನು ೭೪೨ ಕಿಮೀ ಎತ್ತರದಲ್ಲಿ ಲಿಫ್ಟ್-ಆಫ್‌ನಿಂದ ೧೭ ನಿಮಿಷಗಳ ನಂತರ ಕಕ್ಷೆ-೧ ರಲ್ಲಿ ಇರಿಸಲಾಯಿತು. ತರುವಾಯ, ಪಿಎಸ್‌ಎಲ್‌ವಿ-ಸಿ೫೪ ವಾಹನದ ಪ್ರೊಪಲ್ಷನ್ ಬೇರಿಂಗ್‌ನಲ್ಲಿ ಎರಡು ಆರ್ಬಿಟ್ ಚೇಂಜ್ ಥ್ರಸ್ಟರ್‌ಗಳನ್ನು ಬಳಸಿಕೊಂಡು ಕಕ್ಷೆಯ ಬದಲಾವಣೆಯನ್ನು ಮಾಡಲಾಯಿತು.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago