ಇಂಟರ್‌ನೆಟ್ ಒಂದು ಕ್ಷಣ ಸ್ಥಗಿತಗೊಂಡರೆ ಜಗತ್ತು ತಿರುಗುವುದನ್ನೇ ಮರೆತಂತಹ ಅನುಭವವಾಗುತ್ತದೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಮಾನವ ಜಗತ್ತನ್ನು ಆವರಿಸಿದೆ. ನಾನಾ ದೇಶಗಳ ಇಂಟರ್‌ನೆಟ್ ವೇಗ ಹೆಚ್ಚಿಸಲು ಸಾಕಷ್ಟು ಅನ್ವೇಷಣೆಗಳನ್ನು ಮಾಡುತ್ತಲೇ ಇದೆ. ಈ ಓಟದಲ್ಲಿ ಈಗ ಭಾರತವೂ ರೇಸಿಗಿಳಿದಿದೆ.

ದೇಶದ ಪ್ರತಿ ಮೂಲೆಗೂ ಇಂಟರ್‌ನೆಟ್‌ ವ್ಯವಸ್ಥೆ ತಲುಪಿಸಲು ಭಾರತ ಮುಂದಾಗಿದ್ದು, ಈ ಓಟದಲ್ಲಿ ದೇಶದ ದೈತ್ಯ ಟೆಲಿಕಾಂ ಕಂಪೆನಿಗಳು ಸಾಥ್ ನೀಡಿವೆ. ಭಾರತದಲ್ಲಿ ಇಂಟರ್‌ನೆಟ್‌ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸಿದ ರಿಲಯನ್ಸ್ ಜಿಯೋ ಈಗ ಮತ್ತೊಂದು ಮಹತ್ತರ ಕಾಂತ್ರಿಗೆ ಮುನ್ನಡಿಯಿಟ್ಟಿದೆ.

ಸದ್ಯ ಭಾರತದ ಮೂಲೆ ಮೂಲೆಯಲ್ಲಿಯೂ ಅತ್ಯಂತ ವೇಗದ ಅಂತಾರ್ಜಾಲ ಸೇವೆಯನ್ನು ಒದಗಿಸಲು ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾಫೈಬರ್ ಸೇವೆಯನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ.
ಇತ್ತೀಚೆಗೆ ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾ ಫೈಬರ್ ಸೇವೆ, ‘ಜಿಯೋ ಸ್ಪೇಸ್ ಫೈಬರ್’ ಅನ್ನು ಪ್ರದರ್ಶಿಸಿದೆ.

ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಅಂತರ್ಜಾಲವನ್ನು ಆರಂಭಿಸಲು ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ ಲಕ್ಸೆಂಬರ್ಗ್ ಮೂಲದ SESನೊಂದಿಗೆ ಪಾಲುದಾರಿಕೆ ಹೊಂದಿದೆ. ಈಗ ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಾಹ್ಯಾಕಾಶದಿಂದ ಗಿಗಾಬಿಟ್, ಫೈಬರ್ ರೀತಿಯ ಸೇವೆಗಳನ್ನು ತಲುಪಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ MEO ಸಮೂಹವಾಗಿದೆ.

ಸದ್ಯ ಭಾರತದ ಹಳ್ಳಿ ಹಳ್ಳಿಗಳಿಗೂ ಇಂಟರ್‌ನೆಟ್‌ ಸೌಲಭ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ರಿಲಯನ್ಸ್ ಜಿಯೋ ತನ್ನ ಬಲವರ್ಧನೆ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ಮನೋರಂಜನೆ ಹಾಗೂ ಸರ್ಕಾರದ ಸೇವೆಗಳು ಅತಿ ಸುಲಭವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ.

andolanait

Share
Published by
andolanait

Recent Posts

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

6 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

21 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

46 mins ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

5 hours ago