ಇಂಟರ್‌ನೆಟ್ ಒಂದು ಕ್ಷಣ ಸ್ಥಗಿತಗೊಂಡರೆ ಜಗತ್ತು ತಿರುಗುವುದನ್ನೇ ಮರೆತಂತಹ ಅನುಭವವಾಗುತ್ತದೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಮಾನವ ಜಗತ್ತನ್ನು ಆವರಿಸಿದೆ. ನಾನಾ ದೇಶಗಳ ಇಂಟರ್‌ನೆಟ್ ವೇಗ ಹೆಚ್ಚಿಸಲು ಸಾಕಷ್ಟು ಅನ್ವೇಷಣೆಗಳನ್ನು ಮಾಡುತ್ತಲೇ ಇದೆ. ಈ ಓಟದಲ್ಲಿ ಈಗ ಭಾರತವೂ ರೇಸಿಗಿಳಿದಿದೆ.

ದೇಶದ ಪ್ರತಿ ಮೂಲೆಗೂ ಇಂಟರ್‌ನೆಟ್‌ ವ್ಯವಸ್ಥೆ ತಲುಪಿಸಲು ಭಾರತ ಮುಂದಾಗಿದ್ದು, ಈ ಓಟದಲ್ಲಿ ದೇಶದ ದೈತ್ಯ ಟೆಲಿಕಾಂ ಕಂಪೆನಿಗಳು ಸಾಥ್ ನೀಡಿವೆ. ಭಾರತದಲ್ಲಿ ಇಂಟರ್‌ನೆಟ್‌ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸಿದ ರಿಲಯನ್ಸ್ ಜಿಯೋ ಈಗ ಮತ್ತೊಂದು ಮಹತ್ತರ ಕಾಂತ್ರಿಗೆ ಮುನ್ನಡಿಯಿಟ್ಟಿದೆ.

ಸದ್ಯ ಭಾರತದ ಮೂಲೆ ಮೂಲೆಯಲ್ಲಿಯೂ ಅತ್ಯಂತ ವೇಗದ ಅಂತಾರ್ಜಾಲ ಸೇವೆಯನ್ನು ಒದಗಿಸಲು ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾಫೈಬರ್ ಸೇವೆಯನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ.
ಇತ್ತೀಚೆಗೆ ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾ ಫೈಬರ್ ಸೇವೆ, ‘ಜಿಯೋ ಸ್ಪೇಸ್ ಫೈಬರ್’ ಅನ್ನು ಪ್ರದರ್ಶಿಸಿದೆ.

ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಅಂತರ್ಜಾಲವನ್ನು ಆರಂಭಿಸಲು ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ ಲಕ್ಸೆಂಬರ್ಗ್ ಮೂಲದ SESನೊಂದಿಗೆ ಪಾಲುದಾರಿಕೆ ಹೊಂದಿದೆ. ಈಗ ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಾಹ್ಯಾಕಾಶದಿಂದ ಗಿಗಾಬಿಟ್, ಫೈಬರ್ ರೀತಿಯ ಸೇವೆಗಳನ್ನು ತಲುಪಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ MEO ಸಮೂಹವಾಗಿದೆ.

ಸದ್ಯ ಭಾರತದ ಹಳ್ಳಿ ಹಳ್ಳಿಗಳಿಗೂ ಇಂಟರ್‌ನೆಟ್‌ ಸೌಲಭ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ರಿಲಯನ್ಸ್ ಜಿಯೋ ತನ್ನ ಬಲವರ್ಧನೆ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ಮನೋರಂಜನೆ ಹಾಗೂ ಸರ್ಕಾರದ ಸೇವೆಗಳು ಅತಿ ಸುಲಭವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ.

andolanait

Share
Published by
andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

7 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

8 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

14 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

14 hours ago