ಇಂಟರ್‌ನೆಟ್ ಒಂದು ಕ್ಷಣ ಸ್ಥಗಿತಗೊಂಡರೆ ಜಗತ್ತು ತಿರುಗುವುದನ್ನೇ ಮರೆತಂತಹ ಅನುಭವವಾಗುತ್ತದೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಮಾನವ ಜಗತ್ತನ್ನು ಆವರಿಸಿದೆ. ನಾನಾ ದೇಶಗಳ ಇಂಟರ್‌ನೆಟ್ ವೇಗ ಹೆಚ್ಚಿಸಲು ಸಾಕಷ್ಟು ಅನ್ವೇಷಣೆಗಳನ್ನು ಮಾಡುತ್ತಲೇ ಇದೆ. ಈ ಓಟದಲ್ಲಿ ಈಗ ಭಾರತವೂ ರೇಸಿಗಿಳಿದಿದೆ.

ದೇಶದ ಪ್ರತಿ ಮೂಲೆಗೂ ಇಂಟರ್‌ನೆಟ್‌ ವ್ಯವಸ್ಥೆ ತಲುಪಿಸಲು ಭಾರತ ಮುಂದಾಗಿದ್ದು, ಈ ಓಟದಲ್ಲಿ ದೇಶದ ದೈತ್ಯ ಟೆಲಿಕಾಂ ಕಂಪೆನಿಗಳು ಸಾಥ್ ನೀಡಿವೆ. ಭಾರತದಲ್ಲಿ ಇಂಟರ್‌ನೆಟ್‌ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸಿದ ರಿಲಯನ್ಸ್ ಜಿಯೋ ಈಗ ಮತ್ತೊಂದು ಮಹತ್ತರ ಕಾಂತ್ರಿಗೆ ಮುನ್ನಡಿಯಿಟ್ಟಿದೆ.

ಸದ್ಯ ಭಾರತದ ಮೂಲೆ ಮೂಲೆಯಲ್ಲಿಯೂ ಅತ್ಯಂತ ವೇಗದ ಅಂತಾರ್ಜಾಲ ಸೇವೆಯನ್ನು ಒದಗಿಸಲು ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾಫೈಬರ್ ಸೇವೆಯನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ.
ಇತ್ತೀಚೆಗೆ ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾ ಫೈಬರ್ ಸೇವೆ, ‘ಜಿಯೋ ಸ್ಪೇಸ್ ಫೈಬರ್’ ಅನ್ನು ಪ್ರದರ್ಶಿಸಿದೆ.

ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಅಂತರ್ಜಾಲವನ್ನು ಆರಂಭಿಸಲು ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ ಲಕ್ಸೆಂಬರ್ಗ್ ಮೂಲದ SESನೊಂದಿಗೆ ಪಾಲುದಾರಿಕೆ ಹೊಂದಿದೆ. ಈಗ ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಾಹ್ಯಾಕಾಶದಿಂದ ಗಿಗಾಬಿಟ್, ಫೈಬರ್ ರೀತಿಯ ಸೇವೆಗಳನ್ನು ತಲುಪಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ MEO ಸಮೂಹವಾಗಿದೆ.

ಸದ್ಯ ಭಾರತದ ಹಳ್ಳಿ ಹಳ್ಳಿಗಳಿಗೂ ಇಂಟರ್‌ನೆಟ್‌ ಸೌಲಭ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ರಿಲಯನ್ಸ್ ಜಿಯೋ ತನ್ನ ಬಲವರ್ಧನೆ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ಮನೋರಂಜನೆ ಹಾಗೂ ಸರ್ಕಾರದ ಸೇವೆಗಳು ಅತಿ ಸುಲಭವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ.

andolanait

Share
Published by
andolanait

Recent Posts

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

1 hour ago

ಡ್ರಗ್ಸ್‌ ಹಾವಳಿ ನಿಯಂತ್ರಣದಲ್ಲಿ ಸಿಸಿಬಿ ವೈಫಲ್ಯ ; ಕಮಿಷನರ್ ಸೀಮಾ ಲಾಟ್ಕರ್ ಸಿಬ್ಬಂದಿಗೆ ಬಿಗ್ ಶಾಕ್!

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇತ್ತೀಚಿಗೆ ಮಾದಕ ವಸ್ತುಗಳ (ಡ್ರಗ್ಸ್) ತಯಾರಿಕೆ ಮತ್ತು ಮಾರಾಟದ ಜಾಲಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ…

2 hours ago

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

2 hours ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

6 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

7 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

7 hours ago