ಇಂಟರ್‌ನೆಟ್ ಒಂದು ಕ್ಷಣ ಸ್ಥಗಿತಗೊಂಡರೆ ಜಗತ್ತು ತಿರುಗುವುದನ್ನೇ ಮರೆತಂತಹ ಅನುಭವವಾಗುತ್ತದೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಮಾನವ ಜಗತ್ತನ್ನು ಆವರಿಸಿದೆ. ನಾನಾ ದೇಶಗಳ ಇಂಟರ್‌ನೆಟ್ ವೇಗ ಹೆಚ್ಚಿಸಲು ಸಾಕಷ್ಟು ಅನ್ವೇಷಣೆಗಳನ್ನು ಮಾಡುತ್ತಲೇ ಇದೆ. ಈ ಓಟದಲ್ಲಿ ಈಗ ಭಾರತವೂ ರೇಸಿಗಿಳಿದಿದೆ.

ದೇಶದ ಪ್ರತಿ ಮೂಲೆಗೂ ಇಂಟರ್‌ನೆಟ್‌ ವ್ಯವಸ್ಥೆ ತಲುಪಿಸಲು ಭಾರತ ಮುಂದಾಗಿದ್ದು, ಈ ಓಟದಲ್ಲಿ ದೇಶದ ದೈತ್ಯ ಟೆಲಿಕಾಂ ಕಂಪೆನಿಗಳು ಸಾಥ್ ನೀಡಿವೆ. ಭಾರತದಲ್ಲಿ ಇಂಟರ್‌ನೆಟ್‌ ವ್ಯವಸ್ಥೆಯ ದಿಕ್ಕನ್ನೇ ಬದಲಾಯಿಸಿದ ರಿಲಯನ್ಸ್ ಜಿಯೋ ಈಗ ಮತ್ತೊಂದು ಮಹತ್ತರ ಕಾಂತ್ರಿಗೆ ಮುನ್ನಡಿಯಿಟ್ಟಿದೆ.

ಸದ್ಯ ಭಾರತದ ಮೂಲೆ ಮೂಲೆಯಲ್ಲಿಯೂ ಅತ್ಯಂತ ವೇಗದ ಅಂತಾರ್ಜಾಲ ಸೇವೆಯನ್ನು ಒದಗಿಸಲು ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾಫೈಬರ್ ಸೇವೆಯನ್ನು ಯಶಸ್ವಿಯಾಗಿ ಪ್ರದರ್ಶಿಸಿದೆ.
ಇತ್ತೀಚೆಗೆ ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಜಿಯೋ ಭಾರತದ ಮೊದಲ ಸ್ಯಾಟಲೈಟ್ ಆಧಾರಿತ ಗಿಗಾ ಫೈಬರ್ ಸೇವೆ, ‘ಜಿಯೋ ಸ್ಪೇಸ್ ಫೈಬರ್’ ಅನ್ನು ಪ್ರದರ್ಶಿಸಿದೆ.

ಭಾರತದಲ್ಲಿ ಸ್ಯಾಟಲೈಟ್ ಆಧಾರಿತ ಅಂತರ್ಜಾಲವನ್ನು ಆರಂಭಿಸಲು ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ ಲಕ್ಸೆಂಬರ್ಗ್ ಮೂಲದ SESನೊಂದಿಗೆ ಪಾಲುದಾರಿಕೆ ಹೊಂದಿದೆ. ಈಗ ಇತ್ತೀಚಿನ ತಂತ್ರಜ್ಞಾನಗಳನ್ನು ಬಳಸಿಕೊಂಡು ಬಾಹ್ಯಾಕಾಶದಿಂದ ಗಿಗಾಬಿಟ್, ಫೈಬರ್ ರೀತಿಯ ಸೇವೆಗಳನ್ನು ತಲುಪಿಸುವ ಸಾಮರ್ಥ್ಯವನ್ನು ಹೊಂದಿರುವ ವಿಶ್ವದ ಏಕೈಕ MEO ಸಮೂಹವಾಗಿದೆ.

ಸದ್ಯ ಭಾರತದ ಹಳ್ಳಿ ಹಳ್ಳಿಗಳಿಗೂ ಇಂಟರ್‌ನೆಟ್‌ ಸೌಲಭ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ರಿಲಯನ್ಸ್ ಜಿಯೋ ತನ್ನ ಬಲವರ್ಧನೆ ಮಾತ್ರವಲ್ಲದೆ ಶಿಕ್ಷಣ, ಆರೋಗ್ಯ, ಮನೋರಂಜನೆ ಹಾಗೂ ಸರ್ಕಾರದ ಸೇವೆಗಳು ಅತಿ ಸುಲಭವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಲಭ್ಯವಾಗುವಂತೆ ಮಾಡುತ್ತಿದೆ.

andolanait

Share
Published by
andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

8 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

9 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

9 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

10 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

10 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

10 hours ago