ವಿಜ್ಞಾನ ತಂತ್ರಜ್ಞಾನ

ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ, ‘ಕೂ’ ಆ್ಯಪ್‌ನ ಖಾತೆ ರದ್ದು ಮಾಡಿದ ಟ್ವಿಟರ್!

ವಾಷಿಂಗ್ಟನ್‌: ದಿಗ್ಗಜ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ, ಭಾರತದ ಮೈಕ್ರೋಬ್ಲಾಗಿಂಗ್ ಸೈಟ್‌ ‘ಕೂ‘ ಆ್ಯಪ್‌ನ ಖಾತೆಯನ್ನು ಟ್ವಿಟರ್‌ ಅಮಾನತು ಮಾಡಿದೆ.

ಬಳಕೆದಾರರ ಸಮಸ್ಯೆಗಳನ್ನು ಆಲಿಸಲು ಟ್ವಿಟರ್‌ನಲ್ಲಿದ್ದ ‘ಕೂ‘ ಆ್ಯಪ್‌ನ @kooeminence ಎನ್ನುವ ಖಾತೆಯನ್ನು ಶುಕ್ರವಾರ ರದ್ದು ಮಾಡಲಾಗಿದೆ.

ಟ್ವಿಟರ್‌ನ ಈ ವರ್ತನೆಗೆ ಕೂ ಆ್ಯಪ್‌ನ ಸಹ ಸಂಸ್ಥಾಪಕ ಮಾಯಾಂಕ್‌ ಬಿದವಟ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನನಗೆ ಮರೆತು ಹೋಗಿತ್ತು. ಇನ್ನೂ ಇದೆ. ಮಸ್ಟೋಡೋನ್ (ಟ್ವಿಟರ್‌ನ ಪ್ರತಿಸ್ಪರ್ಧಿ) ಲಿಂಕ್‌ಗಳು ಸುರಕ್ಷಿತವಲ್ಲ ಎಂದು ಅದರ ಖಾತೆಯನ್ನು ನಿಷ್ಕ್ರೀಯಗೊಳಿಸಲಾಯ್ತು. ಇದೀಗ ಕೂ ನ ಖಾತೆಯನ್ನು ರದ್ದು ಮಾಡಲಾಗಿದೆ. ನಿಜವಾಗಿಯೂ ನಿಮಗೆ ಎಷ್ಟು ನಿಯಂತ್ರಣ ಬೇಕು?‘ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್‌ ಬಳಸಲು ಉದ್ದೇಶಿಸುವ ವಿಐಪಿಗಳು, ಸೆಲೆಬ್ರೆಟಿಗಳು ತಮಗೆ ಏನಾದರೂ ಗೊಂದಲು ಇದ್ದರೆ, ಪರಿಹರಿಸಿಕೊಳ್ಳಲು ಈ ಖಾತೆಯನ್ನು ಕೆಲ ದಿನಗಳ ಹಿಂದಷ್ಟೇ ತೆರಯಲಾಗಿತ್ತು.

ಸಂಭಾಷಣೆಗೆ ಇದ್ದ ವೇದಿಕೆಯನ್ನು ಟ್ವಿಟರ್ ರಾತ್ರೋ ರಾತ್ರಿ ಕೊಂದು ಹಾಕಿದೆ ಎಂದು ಮಾಯಾಂಕ್ ಕಿಡಿ ಕಾರಿದ್ದಾರೆ. ಅಲ್ಲದೇ ಹಿಂದಿನ ವಾರ ಟ್ವಿಟರ್‌ ಮಾಡಿದ ಕೆಲವು ಕೆಲಸಗಳು ಸರಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

andolanait

Share
Published by
andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

18 mins ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

4 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

4 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

4 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

5 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

5 hours ago