ವಾಷಿಂಗ್ಟನ್: ದಿಗ್ಗಜ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ, ಭಾರತದ ಮೈಕ್ರೋಬ್ಲಾಗಿಂಗ್ ಸೈಟ್ ‘ಕೂ‘ ಆ್ಯಪ್ನ ಖಾತೆಯನ್ನು ಟ್ವಿಟರ್ ಅಮಾನತು ಮಾಡಿದೆ.
ಬಳಕೆದಾರರ ಸಮಸ್ಯೆಗಳನ್ನು ಆಲಿಸಲು ಟ್ವಿಟರ್ನಲ್ಲಿದ್ದ ‘ಕೂ‘ ಆ್ಯಪ್ನ @kooeminence ಎನ್ನುವ ಖಾತೆಯನ್ನು ಶುಕ್ರವಾರ ರದ್ದು ಮಾಡಲಾಗಿದೆ.
ಟ್ವಿಟರ್ನ ಈ ವರ್ತನೆಗೆ ಕೂ ಆ್ಯಪ್ನ ಸಹ ಸಂಸ್ಥಾಪಕ ಮಾಯಾಂಕ್ ಬಿದವಟ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ನನಗೆ ಮರೆತು ಹೋಗಿತ್ತು. ಇನ್ನೂ ಇದೆ. ಮಸ್ಟೋಡೋನ್ (ಟ್ವಿಟರ್ನ ಪ್ರತಿಸ್ಪರ್ಧಿ) ಲಿಂಕ್ಗಳು ಸುರಕ್ಷಿತವಲ್ಲ ಎಂದು ಅದರ ಖಾತೆಯನ್ನು ನಿಷ್ಕ್ರೀಯಗೊಳಿಸಲಾಯ್ತು. ಇದೀಗ ಕೂ ನ ಖಾತೆಯನ್ನು ರದ್ದು ಮಾಡಲಾಗಿದೆ. ನಿಜವಾಗಿಯೂ ನಿಮಗೆ ಎಷ್ಟು ನಿಯಂತ್ರಣ ಬೇಕು?‘ ಎಂದು ಪ್ರಶ್ನೆ ಮಾಡಿದ್ದಾರೆ.
ಕೂ ಆ್ಯಪ್ ಬಳಸಲು ಉದ್ದೇಶಿಸುವ ವಿಐಪಿಗಳು, ಸೆಲೆಬ್ರೆಟಿಗಳು ತಮಗೆ ಏನಾದರೂ ಗೊಂದಲು ಇದ್ದರೆ, ಪರಿಹರಿಸಿಕೊಳ್ಳಲು ಈ ಖಾತೆಯನ್ನು ಕೆಲ ದಿನಗಳ ಹಿಂದಷ್ಟೇ ತೆರಯಲಾಗಿತ್ತು.
ಸಂಭಾಷಣೆಗೆ ಇದ್ದ ವೇದಿಕೆಯನ್ನು ಟ್ವಿಟರ್ ರಾತ್ರೋ ರಾತ್ರಿ ಕೊಂದು ಹಾಕಿದೆ ಎಂದು ಮಾಯಾಂಕ್ ಕಿಡಿ ಕಾರಿದ್ದಾರೆ. ಅಲ್ಲದೇ ಹಿಂದಿನ ವಾರ ಟ್ವಿಟರ್ ಮಾಡಿದ ಕೆಲವು ಕೆಲಸಗಳು ಸರಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…