ವಿಜ್ಞಾನ ತಂತ್ರಜ್ಞಾನ

ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ, ‘ಕೂ’ ಆ್ಯಪ್‌ನ ಖಾತೆ ರದ್ದು ಮಾಡಿದ ಟ್ವಿಟರ್!

ವಾಷಿಂಗ್ಟನ್‌: ದಿಗ್ಗಜ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ, ಭಾರತದ ಮೈಕ್ರೋಬ್ಲಾಗಿಂಗ್ ಸೈಟ್‌ ‘ಕೂ‘ ಆ್ಯಪ್‌ನ ಖಾತೆಯನ್ನು ಟ್ವಿಟರ್‌ ಅಮಾನತು ಮಾಡಿದೆ.

ಬಳಕೆದಾರರ ಸಮಸ್ಯೆಗಳನ್ನು ಆಲಿಸಲು ಟ್ವಿಟರ್‌ನಲ್ಲಿದ್ದ ‘ಕೂ‘ ಆ್ಯಪ್‌ನ @kooeminence ಎನ್ನುವ ಖಾತೆಯನ್ನು ಶುಕ್ರವಾರ ರದ್ದು ಮಾಡಲಾಗಿದೆ.

ಟ್ವಿಟರ್‌ನ ಈ ವರ್ತನೆಗೆ ಕೂ ಆ್ಯಪ್‌ನ ಸಹ ಸಂಸ್ಥಾಪಕ ಮಾಯಾಂಕ್‌ ಬಿದವಟ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನನಗೆ ಮರೆತು ಹೋಗಿತ್ತು. ಇನ್ನೂ ಇದೆ. ಮಸ್ಟೋಡೋನ್ (ಟ್ವಿಟರ್‌ನ ಪ್ರತಿಸ್ಪರ್ಧಿ) ಲಿಂಕ್‌ಗಳು ಸುರಕ್ಷಿತವಲ್ಲ ಎಂದು ಅದರ ಖಾತೆಯನ್ನು ನಿಷ್ಕ್ರೀಯಗೊಳಿಸಲಾಯ್ತು. ಇದೀಗ ಕೂ ನ ಖಾತೆಯನ್ನು ರದ್ದು ಮಾಡಲಾಗಿದೆ. ನಿಜವಾಗಿಯೂ ನಿಮಗೆ ಎಷ್ಟು ನಿಯಂತ್ರಣ ಬೇಕು?‘ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್‌ ಬಳಸಲು ಉದ್ದೇಶಿಸುವ ವಿಐಪಿಗಳು, ಸೆಲೆಬ್ರೆಟಿಗಳು ತಮಗೆ ಏನಾದರೂ ಗೊಂದಲು ಇದ್ದರೆ, ಪರಿಹರಿಸಿಕೊಳ್ಳಲು ಈ ಖಾತೆಯನ್ನು ಕೆಲ ದಿನಗಳ ಹಿಂದಷ್ಟೇ ತೆರಯಲಾಗಿತ್ತು.

ಸಂಭಾಷಣೆಗೆ ಇದ್ದ ವೇದಿಕೆಯನ್ನು ಟ್ವಿಟರ್ ರಾತ್ರೋ ರಾತ್ರಿ ಕೊಂದು ಹಾಕಿದೆ ಎಂದು ಮಾಯಾಂಕ್ ಕಿಡಿ ಕಾರಿದ್ದಾರೆ. ಅಲ್ಲದೇ ಹಿಂದಿನ ವಾರ ಟ್ವಿಟರ್‌ ಮಾಡಿದ ಕೆಲವು ಕೆಲಸಗಳು ಸರಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

andolanait

Share
Published by
andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

56 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

58 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

1 hour ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago