ವಿಜ್ಞಾನ ತಂತ್ರಜ್ಞಾನ

ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ, ‘ಕೂ’ ಆ್ಯಪ್‌ನ ಖಾತೆ ರದ್ದು ಮಾಡಿದ ಟ್ವಿಟರ್!

ವಾಷಿಂಗ್ಟನ್‌: ದಿಗ್ಗಜ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ, ಭಾರತದ ಮೈಕ್ರೋಬ್ಲಾಗಿಂಗ್ ಸೈಟ್‌ ‘ಕೂ‘ ಆ್ಯಪ್‌ನ ಖಾತೆಯನ್ನು ಟ್ವಿಟರ್‌ ಅಮಾನತು ಮಾಡಿದೆ.

ಬಳಕೆದಾರರ ಸಮಸ್ಯೆಗಳನ್ನು ಆಲಿಸಲು ಟ್ವಿಟರ್‌ನಲ್ಲಿದ್ದ ‘ಕೂ‘ ಆ್ಯಪ್‌ನ @kooeminence ಎನ್ನುವ ಖಾತೆಯನ್ನು ಶುಕ್ರವಾರ ರದ್ದು ಮಾಡಲಾಗಿದೆ.

ಟ್ವಿಟರ್‌ನ ಈ ವರ್ತನೆಗೆ ಕೂ ಆ್ಯಪ್‌ನ ಸಹ ಸಂಸ್ಥಾಪಕ ಮಾಯಾಂಕ್‌ ಬಿದವಟ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನನಗೆ ಮರೆತು ಹೋಗಿತ್ತು. ಇನ್ನೂ ಇದೆ. ಮಸ್ಟೋಡೋನ್ (ಟ್ವಿಟರ್‌ನ ಪ್ರತಿಸ್ಪರ್ಧಿ) ಲಿಂಕ್‌ಗಳು ಸುರಕ್ಷಿತವಲ್ಲ ಎಂದು ಅದರ ಖಾತೆಯನ್ನು ನಿಷ್ಕ್ರೀಯಗೊಳಿಸಲಾಯ್ತು. ಇದೀಗ ಕೂ ನ ಖಾತೆಯನ್ನು ರದ್ದು ಮಾಡಲಾಗಿದೆ. ನಿಜವಾಗಿಯೂ ನಿಮಗೆ ಎಷ್ಟು ನಿಯಂತ್ರಣ ಬೇಕು?‘ ಎಂದು ಪ್ರಶ್ನೆ ಮಾಡಿದ್ದಾರೆ.

ಕೂ ಆ್ಯಪ್‌ ಬಳಸಲು ಉದ್ದೇಶಿಸುವ ವಿಐಪಿಗಳು, ಸೆಲೆಬ್ರೆಟಿಗಳು ತಮಗೆ ಏನಾದರೂ ಗೊಂದಲು ಇದ್ದರೆ, ಪರಿಹರಿಸಿಕೊಳ್ಳಲು ಈ ಖಾತೆಯನ್ನು ಕೆಲ ದಿನಗಳ ಹಿಂದಷ್ಟೇ ತೆರಯಲಾಗಿತ್ತು.

ಸಂಭಾಷಣೆಗೆ ಇದ್ದ ವೇದಿಕೆಯನ್ನು ಟ್ವಿಟರ್ ರಾತ್ರೋ ರಾತ್ರಿ ಕೊಂದು ಹಾಕಿದೆ ಎಂದು ಮಾಯಾಂಕ್ ಕಿಡಿ ಕಾರಿದ್ದಾರೆ. ಅಲ್ಲದೇ ಹಿಂದಿನ ವಾರ ಟ್ವಿಟರ್‌ ಮಾಡಿದ ಕೆಲವು ಕೆಲಸಗಳು ಸರಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

andolanait

Share
Published by
andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

14 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago