ವಿಜ್ಞಾನ ತಂತ್ರಜ್ಞಾನ

ಟ್ವಿಟರ್​ ನಿಯಮಗಳ ಉಲ್ಲಂಘನೆ: ರ‍್ಯಾಪರ್ ಕಾನ್ಯೆ ವೆಸ್ಟ್ ಯೆ ಖಾತೆ ಅಮಾನತು

ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಅಮೆರಿಕನ್ ರ‍್ಯಾಪರ್ ಯೆ ಅವರ ಟ್ವಿಟರ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಕಾನ್ಯೆ ವೆಸ್ಟ್ ಎಂದು ಕರೆಯಲ್ಪಡುವ ಅಮೆರಿಕನ್ ರ‍್ಯಾಪರ್ ಯೆ  ಅವರ ಟ್ವಿಟರ್‌ ಖಾತೆಯನ್ನು ರದ್ದು ಮಾಡಲಾಗಿದೆ. ಜನಪ್ರಿಯ ಮೈಕ್ರೋಬ್ಲಾಗಿಂಗ್ ಸೈಟ್‌ನ ನಿಯಮಗಳನ್ನು ಉಲ್ಲಂಘಿಸಿ, ಹಿಂಸಾಚಾರಕ್ಕೆ ಪ್ರಚೋದಿಸುವ ಬರಹ ಪೋಸ್ಟ್ ಮಾಡಿರುವ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ.

ರ‍್ಯಾಪರ್ ಕಾನ್ಯೆ ವೆಸ್ಟ್ ಯೆ ಟ್ವಿಟರ್ ಖಾತೆ ಅಮಾನತುರ‍್ಯಾಪರ್ ಯೆ ಅವರ ಟ್ವಿಟರ್ ಖಾತೆ ತೆರೆದರೆ “ಖಾತೆಯನ್ನು ಅಮಾನತುಗೊಳಿಸಲಾಗಿದೆ” ಎಂಬ ಸೂಚನೆ ನಿಮಗೆ ಸಿಗುತ್ತದೆ. ಟ್ವಿಟರ್ ಸಿಇಒ ಎಲೋನ್ ಮಸ್ಕ್ ಅವರು 22 ಬಾರಿ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತರಾದ ರ‍್ಯಾಪರ್ ಯೆ ಅವರನ್ನು ಟ್ವಿಟರ್​ ವೇದಿಕೆಯಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸಿದ್ದಾರೆ.”ನಾನು ನನ್ನ ಕೈಲಾದಷ್ಟು ಪ್ರಯತ್ನಿಸಿದೆ. ಅದರ ಹೊರತಾಗಿಯೂ ಅವರು ಮತ್ತೆ ಹಿಂಸಾಚಾರವನ್ನು ಪ್ರಚೋದಿಸುವ ಟ್ವೀಟ್ ಮೂಲಕ ನಮ್ಮ ನಿಯಮವನ್ನು ಉಲ್ಲಂಘಿಸಿದ್ದಾರೆ. ಖಾತೆಯನ್ನು ಅಮಾನತುಗೊಳಿಸಲಾಗುವುದು” ಎಂದು ಟ್ವಿಟರ್​ ಬಳಕೆದಾರರ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಮಸ್ಕ್ ರಿಟ್ವೀಟ್ ಮಾಡಿದ್ದಾರೆ.

andolanait

Recent Posts

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

30 mins ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

1 hour ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

1 hour ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

2 hours ago

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

2 hours ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

2 hours ago