ವಿಜ್ಞಾನ ತಂತ್ರಜ್ಞಾನ

10 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ Microsoft

ವಾಷಿಂಗ್ಟನ್​: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್​ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್​ ಕೂಡ ಸೇರಿಕೊಂಡಿದೆ. ಟೆಕ್​ ದೈತ್ಯ ಸಂಸ್ಥೆ​ಯು ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು​ ವರದಿ ಮಾಡಿವೆ. ಮೈಕ್ರೋಸಾಫ್ಟ್​​ ತಮ್ಮ ಸಂಸ್ಥೆಯಲ್ಲಿ ಸರಿಸುಮಾರು ಶೇ 5ರಷ್ಟು ಅಥವಾ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಇಂಜಿನಿಯರಿಂಗ್​ ವಿಭಾಗದಲ್ಲಿ ಬುಧವಾರ ಸಾವಿರಾರು ಜನರು ಕೆಲಸ ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ನಡೆಯುತ್ತಿರುವ ಹೊಸ ಉದ್ಯೋಗ ವಜಾ ಪ್ರಕರಣವಿದು. ಈಗಾಗಲೇ ಅಮೆಜಾನ್​, ಮೆಟಾದಂತಹ ಸಂಸ್ಥೆಗಳು ಬೇಡಿಕೆ ಕುಗ್ಗುವಿಕೆ ಮತ್ತು ಜಾಗತಿಕ ಆರ್ಥಿಕತೆ ಕುಸಿತದಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಅನಿವಾರ್ಯವಾಗಿದೆ ಎಂದು ಪ್ರಕಟಿಸಿ, ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದವು.

ಮಾರುಕಟ್ಟೆ ಕುಸಿತ: ಜೂನ್​ 30ರ ವರದಿ ಅನುಸಾರ, ಮೈಕ್ರೋಸಾಫ್ಟ್​ ಸಂಸ್ಥೆಯಲ್ಲಿ 221,000 ಮಂದಿ ಪೂರ್ಣ ಪ್ರಮಾಣದ ಉದ್ಯೋಗಿಗಳಿದ್ದಾರೆ. ಇದರಲ್ಲಿ ಅಮೆರಿಕದಲ್ಲಿ 122,000 ಮಂದಿ ಕಾರ್ಯ ನಿರ್ವಹಿಸುತ್ತಿದ್ದರೆ, 99,000 ಮಂದಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗಿಗಳಾಗಿದ್ದಾರೆ. ಮೈಕ್ರೋಸಾಫ್ಟ್​​ ತಮ್ಮ ಕ್ಲೌಡ್​ ಯೂನಿಟ್​ ಅಜುರ್​ ಬೆಳವಣಿಗೆ ನಿರ್ವಹಣೆ ಒತ್ತಡದಲ್ಲಿ ಸಿಲುಕಿದೆ. ಅಲ್ಲದೇ, ಮಾರುಕಟ್ಟೆಯ ಕ್ವಾರ್ಟರ್​ನಲ್ಲಿ ಕುಸಿತದ ನಂತರ ವಿಂಡೋಸ್​ ಮತ್ತು ಸಾಧನಗಳ ಮಾರಾಟ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯವಾಗಿದೆ ಎನ್ನಲಾಗಿದೆ.

andolanait

Share
Published by
andolanait

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

3 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

3 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

4 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

5 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

5 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

5 hours ago