ವಾಷಿಂಗ್ಟನ್: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್ ಕೂಡ ಸೇರಿಕೊಂಡಿದೆ. ಟೆಕ್ ದೈತ್ಯ ಸಂಸ್ಥೆಯು ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮೈಕ್ರೋಸಾಫ್ಟ್ ತಮ್ಮ ಸಂಸ್ಥೆಯಲ್ಲಿ ಸರಿಸುಮಾರು ಶೇ 5ರಷ್ಟು ಅಥವಾ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಬುಧವಾರ ಸಾವಿರಾರು ಜನರು ಕೆಲಸ ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ನಡೆಯುತ್ತಿರುವ ಹೊಸ ಉದ್ಯೋಗ ವಜಾ ಪ್ರಕರಣವಿದು. ಈಗಾಗಲೇ ಅಮೆಜಾನ್, ಮೆಟಾದಂತಹ ಸಂಸ್ಥೆಗಳು ಬೇಡಿಕೆ ಕುಗ್ಗುವಿಕೆ ಮತ್ತು ಜಾಗತಿಕ ಆರ್ಥಿಕತೆ ಕುಸಿತದಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಅನಿವಾರ್ಯವಾಗಿದೆ ಎಂದು ಪ್ರಕಟಿಸಿ, ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದವು.
ಮಾರುಕಟ್ಟೆ ಕುಸಿತ: ಜೂನ್ 30ರ ವರದಿ ಅನುಸಾರ, ಮೈಕ್ರೋಸಾಫ್ಟ್ ಸಂಸ್ಥೆಯಲ್ಲಿ 221,000 ಮಂದಿ ಪೂರ್ಣ ಪ್ರಮಾಣದ ಉದ್ಯೋಗಿಗಳಿದ್ದಾರೆ. ಇದರಲ್ಲಿ ಅಮೆರಿಕದಲ್ಲಿ 122,000 ಮಂದಿ ಕಾರ್ಯ ನಿರ್ವಹಿಸುತ್ತಿದ್ದರೆ, 99,000 ಮಂದಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗಿಗಳಾಗಿದ್ದಾರೆ. ಮೈಕ್ರೋಸಾಫ್ಟ್ ತಮ್ಮ ಕ್ಲೌಡ್ ಯೂನಿಟ್ ಅಜುರ್ ಬೆಳವಣಿಗೆ ನಿರ್ವಹಣೆ ಒತ್ತಡದಲ್ಲಿ ಸಿಲುಕಿದೆ. ಅಲ್ಲದೇ, ಮಾರುಕಟ್ಟೆಯ ಕ್ವಾರ್ಟರ್ನಲ್ಲಿ ಕುಸಿತದ ನಂತರ ವಿಂಡೋಸ್ ಮತ್ತು ಸಾಧನಗಳ ಮಾರಾಟ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯವಾಗಿದೆ ಎನ್ನಲಾಗಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…