ವಿಜ್ಞಾನ ತಂತ್ರಜ್ಞಾನ

10 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ Microsoft

ವಾಷಿಂಗ್ಟನ್​: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್​ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್​ ಕೂಡ ಸೇರಿಕೊಂಡಿದೆ. ಟೆಕ್​ ದೈತ್ಯ ಸಂಸ್ಥೆ​ಯು ತನ್ನ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕುತ್ತಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು​ ವರದಿ ಮಾಡಿವೆ. ಮೈಕ್ರೋಸಾಫ್ಟ್​​ ತಮ್ಮ ಸಂಸ್ಥೆಯಲ್ಲಿ ಸರಿಸುಮಾರು ಶೇ 5ರಷ್ಟು ಅಥವಾ 11 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.ಸಂಸ್ಥೆಯ ಮಾನವ ಸಂಪನ್ಮೂಲ ಮತ್ತು ಇಂಜಿನಿಯರಿಂಗ್​ ವಿಭಾಗದಲ್ಲಿ ಬುಧವಾರ ಸಾವಿರಾರು ಜನರು ಕೆಲಸ ಕಳೆದುಕೊಳ್ಳಬಹುದು ಎಂದು ಹೇಳಲಾಗಿದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ನಡೆಯುತ್ತಿರುವ ಹೊಸ ಉದ್ಯೋಗ ವಜಾ ಪ್ರಕರಣವಿದು. ಈಗಾಗಲೇ ಅಮೆಜಾನ್​, ಮೆಟಾದಂತಹ ಸಂಸ್ಥೆಗಳು ಬೇಡಿಕೆ ಕುಗ್ಗುವಿಕೆ ಮತ್ತು ಜಾಗತಿಕ ಆರ್ಥಿಕತೆ ಕುಸಿತದಿಂದಾಗಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಪ್ರಕ್ರಿಯೆ ಅನಿವಾರ್ಯವಾಗಿದೆ ಎಂದು ಪ್ರಕಟಿಸಿ, ಸಾವಿರಾರು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದವು.

ಮಾರುಕಟ್ಟೆ ಕುಸಿತ: ಜೂನ್​ 30ರ ವರದಿ ಅನುಸಾರ, ಮೈಕ್ರೋಸಾಫ್ಟ್​ ಸಂಸ್ಥೆಯಲ್ಲಿ 221,000 ಮಂದಿ ಪೂರ್ಣ ಪ್ರಮಾಣದ ಉದ್ಯೋಗಿಗಳಿದ್ದಾರೆ. ಇದರಲ್ಲಿ ಅಮೆರಿಕದಲ್ಲಿ 122,000 ಮಂದಿ ಕಾರ್ಯ ನಿರ್ವಹಿಸುತ್ತಿದ್ದರೆ, 99,000 ಮಂದಿ ಅಂತಾರಾಷ್ಟ್ರೀಯ ಮಟ್ಟದ ಉದ್ಯೋಗಿಗಳಾಗಿದ್ದಾರೆ. ಮೈಕ್ರೋಸಾಫ್ಟ್​​ ತಮ್ಮ ಕ್ಲೌಡ್​ ಯೂನಿಟ್​ ಅಜುರ್​ ಬೆಳವಣಿಗೆ ನಿರ್ವಹಣೆ ಒತ್ತಡದಲ್ಲಿ ಸಿಲುಕಿದೆ. ಅಲ್ಲದೇ, ಮಾರುಕಟ್ಟೆಯ ಕ್ವಾರ್ಟರ್​ನಲ್ಲಿ ಕುಸಿತದ ನಂತರ ವಿಂಡೋಸ್​ ಮತ್ತು ಸಾಧನಗಳ ಮಾರಾಟ ಇಳಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯವಾಗಿದೆ ಎನ್ನಲಾಗಿದೆ.

andolanait

Share
Published by
andolanait

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

2 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

3 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

3 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

3 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

3 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

4 hours ago