ವಿಜ್ಞಾನ ತಂತ್ರಜ್ಞಾನ

ಒಂದೇ ವಾಟ್ಸ್​ಆ್ಯಪ್​ನಲ್ಲಿ ಅನೇಕ ಅಕೌಂಟ್ : ಹೊಸ ಪ್ರಯೋಗಕ್ಕೆ ಮುಂದಾದ ಮೆಟಾ

ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್​ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ವಾಟ್ಸ್​ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್​ಆ್ಯಪ್​ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.

ಶೀಘ್ರದಲ್ಲೇ ವಾಟ್ಸ್​ಆ್ಯಪ್​ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್​ಆ್ಯಪ್ ಅಪ್ಲಿಕೇಶನ್‌ನಲ್ಲಿ ಅನೇಕ ವಾಟ್ಸ್​ಆ್ಯಪ್​ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಇದೆ.

ಪ್ರಸ್ತುತ, ವಾಟ್ಸ್​ಆ್ಯಪ್​ ಬಳಕೆದಾರರಿಗೆ ಒಂದು ಮೊಬೈಲ್​ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್​ಆ್ಯಪ್​ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್​ಗಳನ್ನು ಬಳಸಬೇಕಾಗುತ್ತದೆ.

ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್​ಆ್ಯಪ್​ ಬೀಟಾವನ್ನು ಅಪ್‌ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.

ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್​ಆ್ಯಪ್​ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.

ಈ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್‌ನಲ್ಲಿ ಖಾಸಗಿ ಚಾಟ್‌ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.

lokesh

Share
Published by
lokesh

Recent Posts

ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳಕರ್‌

ಉಡುಪಿ : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು…

2 mins ago

ತೀವ್ರಗೊಂಡ ಪೂರ್ವಮುಂಗಾರು : ಏ.1ರವರೆಗೆ ರಾಜ್ಯದಲ್ಲಿ ಆಲಿಕಲ್ಲು ಮಳೆ

ಮೈಸೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು…

10 mins ago

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

48 mins ago

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…

1 hour ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

1 hour ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

2 hours ago