ವಾಟ್ಸ್ಆ್ಯಪ್ ಅಪ್ಲಿಕೇಶನ್ನಲ್ಲಿ ಅನೇಕ ವಾಟ್ಸ್ಆ್ಯಪ್ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಲ್ಲಿ ಇದೆ. ಶೀಘ್ರದಲ್ಲೇ ವಾಟ್ಸ್ಆ್ಯಪ್ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ.
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ಆ್ಯಪ್ ಬಳಕೆದಾರರ ಅನುಕೂಲಕ್ಕೆ ತಕ್ಕಂತೆ ಒಂದರ ಹಿಂದೆ ಒಂದರಂತೆ ಆಕರ್ಷಕ ಫೀಚರ್ಗಳನ್ನು ಬಿಡುಗಡೆ ಮಾಡುತ್ತಿದೆ. ಈಗಾಗಲೇ ಅನೇಕ ನೂತನ ಆಯ್ಕೆಗಳು ಪರೀಕ್ಷಾ ಹಂತದಲ್ಲಿದ್ದು, ಸದ್ಯದಲ್ಲೇ ಇದುಕೂಡ ಬಳಕೆದಾರರಿಗೆ ಸಿಗಲಿದೆ. ಇದರ ನಡುವೆ ವಾಟ್ಸ್ಆ್ಯಪ್ ಮತ್ತೊಂದು ಉಪಯುಕ್ತ ಫೀಚರ್ ನೀಡಲು ಮುಂದಾಗಿದೆ. ಇನ್ನುಂದೆ ನಿಮಗೆ ಈ ಹೊಸ ವೈಶಿಷ್ಟ್ಯದ ಮೂಲಕ ಒಂದೇ ವಾಟ್ಸ್ಆ್ಯಪ್ನಲ್ಲಿ ವಿಭಿನ್ನ ಖಾತೆಗಳನ್ನು ಬಳಸಬಹುದಾಗಿದೆ.
ಶೀಘ್ರದಲ್ಲೇ ವಾಟ್ಸ್ಆ್ಯಪ್ ತನ್ನ ಬಳಕೆದಾರರ ಈ ಆಯ್ಕೆಯನ್ನು ನೀಡಲಿದೆ ಎಂದು ವರದಿ ಆಗಿದೆ. ಸುಲಭವಾಗಿ ಹೇಳಬೇಕೆಂದರೆ, ಈ ಹೊಸ ವೈಶಿಷ್ಟ್ಯದ ಮೂಲಕ ಒಂದು ವಾಟ್ಸ್ಆ್ಯಪ್ ಅಪ್ಲಿಕೇಶನ್ನಲ್ಲಿ ಅನೇಕ ವಾಟ್ಸ್ಆ್ಯಪ್ ಖಾತೆಗಳನ್ನು ಸ್ವಿಚ್ ರೀತಿಯಲ್ಲಿ ತೆರೆಯಬಹುದು. ಈಗಾಗಲೇ ಈ ಆಯ್ಕೆ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ನಲ್ಲಿ ಇದೆ.
ಪ್ರಸ್ತುತ, ವಾಟ್ಸ್ಆ್ಯಪ್ ಬಳಕೆದಾರರಿಗೆ ಒಂದು ಮೊಬೈಲ್ನಲ್ಲಿ ಒಂದು ಖಾತೆಯೊಂದಿಗೆ ಲಾಗ್ ಇನ್ ಮಾಡಲು ಮಾತ್ರ ಅನುಮತಿಸುತ್ತದೆ. ಆದ್ದರಿಂದ, ವಿಭಿನ್ನ ಫೋನ್ ಸಂಖ್ಯೆಗಳೊಂದಿಗೆ ಎರಡು ವಾಟ್ಸ್ಆ್ಯಪ್ ಖಾತೆಗಳನ್ನು ಬಳಸುವ ಬಳಕೆದಾರರು ಎರಡು ಮೊಬೈಲ್ಗಳನ್ನು ಬಳಸಬೇಕಾಗುತ್ತದೆ.
ಈ ವೈಶಿಷ್ಟ್ಯವು ಪ್ರಸ್ತುತ ಕೆಲವು ಬೀಟಾ ಪರೀಕ್ಷಕರಿಗೆ ಲಭ್ಯವಿದೆ ಮತ್ತು ಮುಂಬರುವ ವಾರಗಳಲ್ಲಿ ಹೆಚ್ಚಿನ ಬಳಕೆದಾರರಿಗೆ ಹೊರತರಲಾಗುವುದು ಎಂದು ವರದಿಗಳು ಹೇಳಿದೆ. ಆಂಡ್ರಾಯ್ಡ್ ಆವೃತ್ತಿ 2.23.17.8 ಗಾಗಿ ವಾಟ್ಸ್ಆ್ಯಪ್ ಬೀಟಾವನ್ನು ಅಪ್ಡೇಟ್ ಮಾಡಿದರೆ ಈ ಆಯ್ಕೆ ಸಿಗಲಿದೆ. ಆದಾಗ್ಯೂ ಕೆಲವು ಬಳಕೆದಾರರಿಗೆ ಹಿಂದಿನ 2.23.17.7 ಆವೃತ್ತಿಯಲ್ಲಿ ಈ ವೈಶಿಷ್ಟ್ಯವನ್ನು ಉಪಯೋಗಿಸಲು ಸಾಧ್ಯವಾಗುತ್ತಿದೆ.
ಈ ವೈಶಿಷ್ಟ್ಯ ಬಳಸಲು, ಬಳಕೆದಾರರು QR ಕೋಡ್ ಬಟನ್ ಬಳಿ ಇರುವ ಬಾಣದ ಐಕಾನ್ ಅನ್ನು ಟ್ಯಾಪ್ ಮಾಡುವ ಮೂಲಕ ಹೊಸ ವಾಟ್ಸ್ಆ್ಯಪ್ ಖಾತೆಯನ್ನು ಸೇರಿಸಲು ಸಾಧ್ಯವಾಗುತ್ತದೆ. ಅದೇ ಮೆನುವಿನಲ್ಲಿ ಬೇರೆ ಖಾತೆಗೆ ಬದಲಾಯಿಸುವ ಆಯ್ಕೆ ಇದೆ. ಹೊಸದಾಗಿ ಸೇರಿಸಲಾದ ಖಾತೆಯನ್ನು ಲಾಗ್ ಔಟ್ ಮಾಡಲು ಆಯ್ಕೆ ಕೂಡ ನೀಡಲಾಗಿದೆ.
ಈ ವೈಶಿಷ್ಟ್ಯವು ಬಳಕೆದಾರರಿಗೆ ಬಹು ಖಾತೆಗಳನ್ನು ನಿರ್ವಹಿಸುವ ಅನುಕೂಲವನ್ನು ಒದಗಿಸುವುದಲ್ಲದೆ, ಒಂದೇ ಅಪ್ಲಿಕೇಶನ್ನಲ್ಲಿ ಖಾಸಗಿ ಚಾಟ್ಗಳು, ಕೆಲಸದ ಸಂಭಾಷಣೆಗಳು ಮತ್ತು ಇತರ ಸಂದೇಶಗಳಿಗೆ ಸಹಾಯ ಮಾಡುತ್ತದೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…